ಕ್ರೈಂ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಎಸ್ಕೇಪ್ ಆಗಿದ್ದ ಶಿಕ್ಷಕ ಪುತ್ತೂರು ನ್ಯಾಯಾಲಯಕ್ಕೆ ಹಾಜರು

442

ಸುಬ್ರಹ್ಮಣ್ಯ: ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ವಿದ್ಯಾರ್ಥಿನಿಯೊಬ್ಬಳ ನ್ನು ಅತ್ಯಾಚಾರ ಮಾಡಿದ ಆರೋಪಕ್ಕೊಳಗಾಗಿ ಬಂಧನಕ್ಕೊಳಗಾಗಿದ್ದ. ನಂತರ ಒಂದೇ ದಿನದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಅದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯ ಮನೆಯವರು ಹೈಕೋರ್ಟ್ ಮೊರೆ ಹೋಗಿದ್ದರು. ಆರೋಪಿಯ ಜಾಮೀನು ರದ್ದುಗೊಂಡಿತ್ತು. ಬಳಿಕ ಶಿಕ್ಷಕನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಆದರೆ ಗುರುರಾಜ್ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ. ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

See also  ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಕೊನೆಯುಸಿರು
  Ad Widget   Ad Widget   Ad Widget   Ad Widget