ಕರಾವಳಿಕಾಸರಗೋಡುಪುತ್ತೂರುಸುಳ್ಯ

ಸುಳ್ಯ, ಪುತ್ತೂರು, ಮಂಗಳೂರಿನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿದ ‘ಪಿರ್ಕಿಲು’ ಸಿನಿಮಾ, ಮೇ26 ರಂದು ತೆರೆಗೆ, ಭಾರೀ ನಿರೀಕ್ಷೆ

273

ನ್ಯೂಸ್ ನಾಟೌಟ್: ತುಳು ಸಿನಿಮಾ ಇಂಡೆಸ್ಟ್ರಿಯಲ್ಲಿ ಹಲವಾರು ಸಿನಿಮಾಗಳು ತೆರೆ ಕಾಣುತ್ತಿವೆ. ಈ ಪಟ್ಟಿಗೆ ಇದೀಗ ಮತ್ತೊಂದು ಹೊಸ ಸಿನಿಮಾ ‘ಪಿರ್ಕಿಲು’ ಕೂಡ ಸೇರಿಕೊಂಡಿದ್ದು ಭಾರೀ ನಿರೀಕ್ಷೆ ಮೂಡಿಸಿದೆ.

ಟೈಟಲ್ ಹೇಳುವಂತೆಯೇ ಸಿನಿಮಾದಲ್ಲಿ ಹುಡುಗರು ತಲೆ ಹರಟೆ ಮಾಡುವ ಕೆಲವು ಸನ್ನಿವೇಶಗಳನ್ನು ನಿರ್ದೇಶಕ ಎಚ್‌ ಡಿ ಆರ್ಯ ಅತ್ಯಂತ ಸುಂದರವಾಗಿ ಚಿತ್ರಿಸಿದ್ದಾರೆ. ಒಂದಷ್ಟು ಹಾಸ್ಯ, ಫ್ಯಾಮಿಲಿ ಸೆಂಟಿಮೆಂಟ್, ಹರೆಯದ ಹುಡುಗರ ಕಿತಾಪತಿಗಳನ್ನು ಸಿನಿಮಾದಲ್ಲಿ ಸೆರೆ ಹಿಡಿಯಲಾಗಿದೆ. ಸುಳ್ಯ, ಪುತ್ತೂರು, ಮಂಗಳೂರು, ಕುರಿಯ, ಉಪ್ಪಿನಂಗಡಿಯಲ್ಲಿ ಒಟ್ಟು ೨೯ ದಿನಗಳ ಕಾಲ ಸಿನಿಮಾ ಚಿತ್ರೀಕರಣಗೊಂಡಿದೆ. ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಸತೀಶ್‌ ಪೆರ್ನೆ, ಶಿವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಆರ್ಯ ಅವರು ಕಥೆ-ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬಬಿತ ತುಳು ಭಾಷೆಗೆ ಸಂಭಾಷಣೆಯನ್ನು ಅನುವಾದಿಸಿದ್ದಾರೆ. ಈ ಸಿನಿಮಾಕ್ಕೆ ದೊಡ್ಡ ಸ್ಟಾರ್ ನಟರ ದಂಡೇ ಇದೆ. ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್, ನವರಸ ರಾಜ ಬೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ರವಿ ರಾಮಕುಂಜ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಕುರಿತು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ವೇಳೆ ನಟ ಬೋಜರಾಜ್ ವಾಮಂಜೂರ್ ಸೇರಿದಂತೆ ಹಲವಾರು ಮಂದಿ ಚಿತ್ರ ತಂಡದ ಸದಸ್ಯರು ಉಪಸ್ಥಿತರಿದ್ದರು.

See also  ಬೆಳ್ಳಾರೆ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕಣ್ಣಿನ ಉಚಿತ ತಪಾಸಣೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget