ಕರಾವಳಿ

ದೀಕ್ಷೆ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

345

ನ್ಯೂಸ್ ನಾಟೌಟ್: ಸದಾ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ವಿಚಾರದಿಂದ ಸದ್ದು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ದೀಕ್ಷೆ ಪಡೆದುಕೊಂಡು ಸುದ್ದಿಯಾಗಿದ್ದಾರೆ.

ಚಿತ್ರದುರ್ಗದ ಮುರುಗ ಮಠದ ಶರಣರಿಂದ ಇಷ್ಟ ಲಿಂಗದ ದೀಕ್ಷೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಹುಲ್ ಗಾಂಧಿ ದೀಕ್ಷೆ ಪಡೆದುಕೊಳ್ಳುವ ಮನಸ್ಸು ಮಾಡಿದ್ದರು. ಇದಕ್ಕಾಗಿ ಮಠವನ್ನು ಸಂಪರ್ಕಿಸಿ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿಕೊಂಡಿದ್ದರು. ಹೀಗಾಗಿ ರಾಹುಲ್ ಗಾಂಧಿ ಕೋರಿಕೆ ಮೇರೆಗೆ ಶರಣರು ದೀಕ್ಷೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನ ಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ರಾಹುಲ್ ಗಾಂಧಿ ಹಲವು ಸಲ ಮೋದಿ ಎದುರು ಮುಗ್ಗರಿಸಿದ್ದರು. ಮುಂಬರುವ ಚುನಾವಣೆಯಲ್ಲಿಯಾದರೂ ದೇಶದ ಚುಕ್ಕಾಣಿ ಹಿಡಿಯುವುದಕ್ಕೆ ಇಷ್ಟಲಿಂಗದ ದೀಕ್ಷೆ ಸಹಾಯ ಮಾಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

See also  ಸುಳ್ಯ: ಪ್ರೊ ಕಬಡ್ಡಿ ಖ್ಯಾತಿಯ ತೆಲುಗು ಟೈಟಾನ್ಸ್ ಕೋಚ್ ಜಗದೀಶ್ ಕುಂಬ್ಳೆ ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಕಚೇರಿಗೆ ಭೇಟಿ, ಸಂಸ್ಥೆ ವತಿಯಿಂದ ಗೌರವ ಸನ್ಮಾನ
  Ad Widget   Ad Widget     Ad Widget   Ad Widget   Ad Widget   Ad Widget