ಕ್ರೈಂರಾಜಕೀಯವೈರಲ್ ನ್ಯೂಸ್

ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ..! ಘಟನೆ ನಡೆದದ್ದೆಲ್ಲಿ..?

145

ನ್ಯೂಸ್ ನಾಟೌಟ್: ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಕಾರಿನ ಮೇಲೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ದಾಳಿ ನಡೆಸಲಾಗಿದೆ. ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬುಧವಾರ(೩೧/ಜ) ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಮಾಲ್ದಾ ಜಿಲ್ಲೆಯಲ್ಲಿ ಭಾರೀ ಜನಸಂದಣಿಯು ರಾಹುಲ್ ಗಾಂಧಿಯವರ ಕಾರಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದು, ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದೆ ಆದರೆ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

See also  ವೇಶ್ಯಾವಾಟಿಕೆಗೆ ರಕ್ಷಣೆ ಕೊಡಿ ಎಂದು ಹೈಕೋರ್ಟ್ ಮೆಟ್ಟಿಲೇರಿದ ವಕೀಲ..! ಹೈಕೋರ್ಟ್ ಹೇಳಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget