ಕರಾವಳಿ

ಭಾರಿ ಮಳೆಗೆ ಕೊಚ್ಚಿ ಹೋದ ಸಂಪಾಜೆಯ ಸೇತುವೆ

ಸಂಪಾಜೆ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಸಂಪಾಜೆಯ ಹೊಳೆ ಭರ್ತಿಯಾಗಿ ಜನ ಜೀವನಕ್ಕೆ ಅಡಚಣೆಯಾದ ಘಟನೆ ನಡೆದಿದೆ. ಎನ್‌ ಎಸ್ ದೇವಿ ಪ್ರಸಾದ್‌ ಅವರ ಮನೆಗೆ ಸಂಪರ್ಕ ಕಲ್ಪಿಸುವ ಮುಳುಗು ಸೇತುವೆ ಹಾಗೂ ರವೀಂದ್ರ ಸಂಪಾಜೆ ಅವರ ತೋಟಕ್ಕೆ ಹೋಗುವ ಕಾಲು ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ನೀರಿನ ಮಟ್ಟ ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏರಿಕೆ ಕಂಡು ಹಲವು ತೋಟಗಳಿಗೆ ನೀರು ನುಗ್ಗಿದೆ. ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೆರೆಯ ದಕ್ಷಿಣ ಕನ್ನಡ ಜಿಲ್ಲೆಗೂ ಮಳೆ ಬಿರುಸಾಗಿ ಅಪ್ಪಳಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ಮಂಗಳೂರು: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಶ್ರದ್ದಾಂಜಲಿ ಸಭೆ

ಮಂಗಳೂರಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳು ಪತ್ತೆ !

ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅರೆಸ್ಟ್, ಸಕಲ ಸಿದ್ಧತೆ ಮಾಡಿಕೊಂಡಿರುವ SIT