ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದ ಪರಿಣಾಮ, ಕಾಸರಗೋಡಿನ ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿರುವುದರಿಂದ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಾಂಗಣದೊಳಗೆ ಮಳೆ ನೀರು ತುಂಬಿದೆ.
ಸುಮಾರು 1 ಅಡಿಗೂ ಹೆಚ್ಚು ನೀರು ತುಂಬಿಕೊಂಡಿದೆ. ಪ್ರತಿ ವರ್ಷವೂ ಈ ದೇವಸ್ಥಾನದೊಳಗೆ ನೀರು ಹರಿಯುವುದು ಸಾಮಾನ್ಯ.
ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.
ಇತ್ತೀಚಿಗೆ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಜೃಂಭಣೆಯಾಗಿ ಬ್ರಹ್ಮಕಲಶ ನೆರವೇರಿತ್ತು.
ರೇಡ್ ಆಗುತ್ತಿದ್ದಂತೆ ಕಿಟಕಿಯಲ್ಲಿ ಕಂತೆ, ಕಂತೆ ನೋಟು ಎಸೆದ ಸರ್ಕಾರಿ ನೌಕರ..! ಸುಮಾರು 2 ಕೋಟಿ ರೂಪಾಯಿ ವಶಕ್ಕೆ..!
ಮಂಗಳೂರು: ತಾಯಿಯೊಂದಿಗೆ ಗುಡ್ಡ ಕುಸಿತದ ಅವಶೇಷದಡಿ ಸಿಲುಕಿದ್ದ ಮತ್ತೊಂದು ಮಗುವೂ ಸಾವು..! ಒಟ್ಟು ಮೂವರು ಬಲಿ..!