ಕರಾವಳಿ

ದಕ್ಷಿಣ ಕನ್ನಡ: ಮಂಗಳೂರು, ಮೂಡಬಿದಿರೆ, ಬೆಳ್ತಂಗಡಿಯಲ್ಲಿ ಮಳೆ ಆರ್ಭಟ, ಯೆಲ್ಲೊ ಅಲರ್ಟ್ ಘೋಷಣೆ

178

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ದೊರಕಿದೆ.

ಈಗಾಗಲೇ ಮಂಗಳೂರು, ಮೂಡಬಿದಿರೆ, ಬೆಳ್ತಂಗಡಿಯಲ್ಲಿ ವರುಣನ ಅಬ್ಬರ ಶುರುವಾಗಿದ್ದು ಇನ್ನೂ ನಿಂತಿಲ್ಲ. ಇದೇ ಪ್ರಮಾಣದ ಮಳೆ ಜಿಲ್ಲೆಯಾದ್ಯಂತ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

40-45ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಕಟ್ಟೆಚ್ಚರವನ್ನು ನೀಡಲಾಗಿದೆ. ಇದೇ ವೇಳೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ

ಹಲವೆಡೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಮಳೆಯಿಂದ ತುಸು ಹೆಚ್ಚು ಕಷ್ಟವಾಗುತ್ತಿದೆ.

See also  ಸಂಪಾಜೆ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ, ಗಾಂಧಿ ಜಯಂತಿಯಂದು ಮುಖ್ಯಮಂತ್ರಿಯಿಂದ ಹಸ್ತಾಂತರ
  Ad Widget   Ad Widget   Ad Widget   Ad Widget   Ad Widget   Ad Widget   Ad Widget