Latestಕ್ರೈಂಸಿನಿಮಾ

ರಜತ್‍ ಮೇಲೆ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ..! ಕಿರುತೆರೆ ನಟನಿಗೆ 14 ದಿನ ಜೈಲು..!

762

ನ್ಯೂಸ್ ನಾಟೌಟ್: ನ್ಯಾಯಾಲಯದ ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ನಟ ರಜತ್ ಕಿಶನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಮತ್ತೋರ್ವ ಆರೋಪಿ, ಕಿರುತೆರೆ ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂಪಾಯಿ ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಕಿಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಮತ್ತು ಆದೇಶವನ್ನು ನ್ಯಾಯಾಧೀಶರು ಎ.17ಕ್ಕೆ ಕಾಯ್ದಿರಿಸಿದ್ದಾರೆ.

ಮಾರಕಾಸ್ತ್ರ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಕಿರುತೆರೆ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು.

ಆದರೆ, ನ್ಯಾಯಾಲಯದ ವಿಚಾರಣೆಗೆ ಆರೋಪಿ ರಜತ್ ಕಿಶನ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್‍ ನ ಅನ್ವಯ ರಜತ್ ಕಿಶನ್ ಇಂದು(ಎ.16) ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಇನ್ನು ಮುಂದೆ ಚಲಿಸುವ ಟ್ರೈನ್​ ನಲ್ಲೂ ಹಣ ಡ್ರಾ ಮಾಡಬಹುದು..! ರೈಲ್ವೆ ಇಲಾಖೆಯಿಂದ ಹೊಸ ಪ್ರಯೋಗ..!

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಕೇಸ್ ನಲ್ಲಿ ತಾಯಿ ತಪ್ಪೊಪ್ಪಿಗೆ..! ಆಸ್ಪತ್ರೆಗೆ ದಾಖಲು..!

See also  ಮಧ್ಯರಾತ್ರಿ ಸೀನಿಯರ್‌ ವಿದ್ಯಾರ್ಥಿಗಳಿಂದ ವಿಚಿತ್ರ ರ‍್ಯಾಗಿಂಗ್..! ಜೂನಿಯರ್ ಗಳಿಗೆ ಕ್ರೂರವಾಗಿ ಥಳಿತ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget