ಕ್ರೈಂ

ಲೈಂಗಿಕ ಕಿರುಕುಳ ಆರೋಪಿ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಮಂಗಳೂರಿನ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

ವಕೀಲ ರಾಜೇಶ್ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ. ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಿಗೂ ಮಾಹಿತಿ ನೀಡಲಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಸಂತ್ರಸ್ತ ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದು, ಆ ನಂತರ ಆರೋಪಿ ವಕೀಲ ತಲೆಮರೆಸಿಕೊಂಡಿದ್ದ. ಆತ ತಲೆ ಮರೆಸಿಕೊಳ್ಳಲು ಸಹಕರಿಸಿದ್ದ ಆತನ ಗೆಳೆಯನನ್ನು ಪೋಲಿಸರು ಬಂಧಿಸಿದ್ದರೂ, ಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.

Related posts

ಕನ್ನಡಿಯಲ್ಲಿ ತನ್ನ ಮುಖ ನೋಡಿ ವಿಚಿತ್ರವಾಗಿ ವರ್ತಿಸಿದ ಕೋತಿ..! ಇಲ್ಲಿದೆ ವೈರಲ್ ವಿಡಿಯೋ

ಸಿಎಂ ಸಿದ್ದು ಬಗ್ಗೆ ಅಶ್ಲೀಲ ಆಡಿಯೋ ವೈರಲ್, ಕೊಕ್ಕಡದ ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್, ಸಹೋದರ ಪ್ರತಿಕ್ರಿಯಿಸಿದ್ದೇನು..?

ಕುವೈತ್ ​ನ ಬೃಹತ್ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ..! ನಾಲ್ವರು ಭಾರತೀಯರು ಸೇರಿ 35 ಜನ ಸಜೀವ ದಹನ..! ಇಲ್ಲಿದೆ ವೈರಲ್ ವಿಡಿಯೋ