Latestಕ್ರೈಂದೇಶ-ವಿದೇಶ

ರಾಮಮಂದಿರ ಸ್ಫೋಟಿಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್..! ಅಬ್ದುಲ್ ರೆಹಮಾನ್ ನಿಂದ ಗ್ರನೇಡ್ ವಶಕ್ಕೆ..!

754

ನ್ಯೂಸ್ ನಾಟೌಟ್: ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಕೇರಳ: ಹಿಡಿದ ಮೀನನ್ನು ಬಾಯಲ್ಲಿ ಹಾಕಿಕೊಂಡು ಮತ್ತೊಂದನ್ನು ಹಿಡಿಯಲು ಹೋದ ಯುವಕ..! ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು..!

ಫರಿದಾಬಾದ್ ಪೊಲೀಸರ ಸಹಾಯದಿಂದ, ಎಟಿಎಸ್ ಸಂಪೂರ್ಣ ಶೋಧ ನಡೆಸಿ, ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ. ಅಬ್ದುಲ್ ರೆಹಮಾನ್‌ ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರೆದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ನಿಲ್ಲಿಸಿದ್ದ ವಾಹನಗಳ ಮೇಲೆ ‘ಜೆಸಿಬಿ’ ಹತ್ತಿಸಿದ 17ರ ಯುವಕ..! ವಿಡಿಯೋ ವೈರಲ್..!

 

See also  ಶಾಸಕನ ಕೆನ್ನೆಗೆ ಬಾರಿಸಿದ ಮಹಿಳೆ..! ನದಿ ಪ್ರವಾಹದಿಂದ ರೊಚ್ಚಿಗೆದ್ದ ಮಹಿಳೆಯ ವಿಡಿಯೋ ವೈರಲ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget