ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ರಾಮನ ಹೆಸರು ಇರೋದಕ್ಕೆ ರಾಮೇಶ್ವರಂ ಹೋಟೆಲ್ ಟಾರ್ಗೆಟ್ ಮಾಡಿದ್ದಾರೆ ಎಂದ ಯತ್ನಾಳ್..! ಗ್ಯಾರಂಟಿ ಕೊಟ್ಟ ಸರ್ಕಾರದಿಂದ ಜನರ ಜೀವಕ್ಕೆ ಗ್ಯಾರಂಟಿ ಇಲ್ಲ ಎಂದ ಶಾಸಕ

179

ನ್ಯೂಸ್ ನಾಟೌಟ್: ರಾಮನ ಹೆಸರು ಇರೋದಕ್ಕೆ ರಾಮೇಶ್ವರಂ ಹೋಟೆಲ್‌ನ ಟಾರ್ಗೆಟ್ ಮಾಡಿದ್ದಾರೆ, ಅದು ಶುಕ್ರವಾರವೇ ಬಾಂಬ್ ಸ್ಫೋಟ ಮಾಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಉದ್ದೇಶಪೂರ್ವಕವಾಗಿಯೇ ನಡೆಸಿರುವ ಕೃತ್ಯ ಅನ್ನಿಸುತ್ತೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ರಾಮನ ಹೆಸರು ಇರುವ ರಾಮೇಶ್ವರಂ ಹೋಟೆಲ್‌ನ ಟಾರ್ಗೆಟ್ ಮಾಡಿದ್ದಾರೆ. ಶುಕ್ರವಾರವೇ ಈ ಕೃತ್ಯ ಎಸಗಿದ್ದಾರೆ.

ರಾಮಮಂದಿರ ನಿರ್ಮಾಣ ಆದ ಮೇಲೆ ಎಲ್ಲಾದರೂ ತಮ್ಮ ಅಸ್ತಿತ್ವ ತೋರಿಸಬೇಕು ಅಂತ ಕೆಲ ಸಂಘಟನೆಗಳು ಉದ್ದೇಶಪೂರ್ವಕವಾಗಿ ಇಂತಹ ಕೆಲಸ ಮಾಡ್ತಿದ್ದಾರೆ. ಅವರೆಲ್ಲರಿಗೂ ವಿನಾಶ ಕಾಲ ಬಂದಿದೆ ಎಂದು ಎಚ್ಚರಿಸಿದ್ದಾರೆ. ಇನ್ನೂ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಭಯೋದ್ಪಾದಕರಿಗೆ ಕರ್ನಾಟಕ ಅತ್ಯಂತ ಸುರಕ್ಷಿತ ತಾಣ ಅಂತ ಅನ್ನಿಸಿದೆ. ಘೋಷಣೆ ಕೂಗಿದ್ದನ ಪರೀಕ್ಷೆಗೆ ಕಳುಹಿಸುವ ಅವಶ್ಯಕತೆಯಿಲ್ಲ ಅಂತ ಆವಾಗಲೆ ಹೇಳಿದ್ದೆ. ಏಕೆಂದರೆ ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ಬಿತ್ತರಿಸಿದ್ದರು.

ಈಗ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದರೂ ಬಹಿರಂಗಪಡಿಸಿಲ್ಲ. ಈಗ ಬಾಂಬ್ ಬ್ಲಾಸ್ಟ್ ಪ್ರಕರಣ ನೋಡಿದ್ರೆ ಈ ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಗೆ ಇಂಬು ಕೊಡ್ತಾ ಇದೆ ಅನ್ನೋದು ಸ್ಪಷ್ಟವಾಗ್ತಿದೆ. ಇದನ್ನ ಮಾಡಿದ್ದು ಯಾರೋ ಹಿಂದೂ ಅಲ್ಲ, ಮುಸ್ಲಿಂ ವ್ಯಕ್ತಿಯೇ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಯಾರೋ ಒಬ್ಬರು ಬ್ರ್ಯಾಡ್‌ ಬೆಂಗಳೂರು ಮಾಡ್ತೀನಿ ಅಂತ ಹೇಳ್ದಾಗ, ಬಾಂಬ್ ಬೆಂಗಳೂರು ಮಾಡ್ತಾರೆ ಅಂತ ಹೇಳಿದ್ದೆ. ಈಗ ಅದು ನಿಜವಾಗುತ್ತಿದೆ. ಸಿದ್ದರಾಮಯ್ಯ ಅವರೇ ಭಯೋತ್ಪಾದನೆ ನಿಲ್ಲಿಸಲು ಆಗದಿದ್ದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಕೇವಲ ಗ್ಯಾರಂಟಿ, ಗ್ಯಾರಂಟಿ ಅಂದು ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ.

See also  ಅಂದು ಪ್ರಧಾನಿ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ! ಎಚ್​​ಡಿಕೆ ಸ್ಫೋಟಕ ಹೇಳಿಕೆಯ ಹಿಂದಿನ ರಹಸ್ಯವೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget