ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ರಾಮಾಯಣ ನಾಟಕದ ವೇಳೆ ಜೀವಂತ ಹಂದಿಯನ್ನು ಕೊಂದು ತಿಂದ ಕಲಾವಿದ..! ರಾಕ್ಷಸ ಪಾತ್ರಧಾರಿ ಅರೆಸ್ಟ್, ಇಲ್ಲಿದೆ ವಿಡಿಯೋ

171

ನ್ಯೂಸ್ ನಾಟೌಟ್: ‘ರಾಮಾಯಣʼ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ ರಂಗಭೂಮಿ ಕಲಾವಿದನೊಬ್ಬ ವೇದಿಕೆಯ ಮೇಲೆ ಜೀವಂತ ಹಂದಿಯ ಹೊಟ್ಟೆಯನ್ನು ಬಗೆದು ಮಾಂಸವನ್ನು ಕಿತ್ತು ತಿಂದಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಈ ಸಂಬಂಧ 45 ವರ್ಷದ ಬಿಂಬಾಧರ ಗೌಡ ಎಂಬಾತನನ್ನು ಬಂಧಿಸಲಾಗಿದ್ದು, ಇದರ ಜತೆ ಆಯೋಜಕರಲ್ಲಿ ಒಬ್ಬರನ್ನು ಬಂಧಿಸಲಾಗಿದೆ.
ನವೆಂಬರ್ 24 ರಂದು ಹಿಂಜಿಲಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಲಾಬ್ ಗ್ರಾಮದಲ್ಲಿ ನಡೆದ ನಡೆದ ರಾಮಾಯಣ ನಾಟಕದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ವಿಡಿಯೋ ಬೆಳಕಿಗೆ ಬಂದಿದೆ.

ಕಂಜಿಯಾನಲ್ ಎಂಬ ಯಾತ್ರೆಯ ಸಂದರ್ಭದಲ್ಲಿ ಗ್ರಾಮಸ್ಥರ ಗುಂಪೊಂದು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತು.
ನಾಟಕ ನೋಡಲು ಬಂದಿದ್ದ ಪ್ರೇಕ್ಷಕರನ್ನು ರಂಜಿಸುವ ನಿಟ್ಟಿನಲ್ಲಿ ವೇದಿಕೆಯಲ್ಲಿ ಜೀವಂತ ಹಾವು ಹಾಗೂ ಹಂದಿಯನ್ನು ಪ್ರದರ್ಶಿಸಲಾಗಿತ್ತು. ಈ ವೇಳೆ ರಾಕ್ಷಸನ ಪಾತ್ರವನ್ನು ಮಾಡುತ್ತಿದ್ದು ಕಲಾವಿದ ಜೀವಂತ ಹಂದಿಯ ಹೊಟ್ಟೆಯನ್ನು ಚಾಕುವಿನಿಂದ ಸೀಳಿ, ಹಸಿ ಮಾಂಸವನ್ನು ಪ್ರೇಕ್ಷಕರ ಮುಂದೆಯೇ ವೇದಿಕೆಯಲ್ಲಿ ಸೇವಿಸಿದ್ದಾನೆ.

https://twitter.com/SanjeevUpadhy13/status/1863926117414969618

ಈ ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಸದಸ್ಯರಾದ ಬಾಬು ಸಿಂಗ್ ಮತ್ತು ಸನಾತನ ಬಿಜುಲಿ ಅವರು ವಿಧಾನಸಭೆಯಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇನ್ನೊಂದು ಕಡೆ ಪ್ರಾಣಿದಯಾ ಸಂಘದವರು ಕಲಾವಿದರ ಬಂಧನಕ್ಕೆ ಆಗ್ರಹಿಸಿದ್ದರು.

See also  ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಗ್ರಾಮದ ಐವರ ಕೊಲೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget