Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

‘ದಿ ರಣ್ವೀರ್ ಶೋ’ ಪ್ರಸಾರಕ್ಕೆ ಸುಪ್ರೀಂ ಕೋರ್ಟ್​ ಅನುಮತಿ..! 280 ಜನರಿಗೆ ಉದ್ಯೋಗ ನೀಡಿದ್ದ ರಣ್ವೀರ್ ಅಲಹಾಬಾದಿಯಾಗೆ ರಿಲೀಫ್..!

905

ನ್ಯೂಸ್ ನಾಟೌಟ್: ಜನಪ್ರಿಯ ಯೂಟ್ಯೂಬರ್ ರಣ್ವೀರ್ ಅಲಹಾಬಾದಿಯಾ​ (Ranveer Allahbadia) ಅನೇಕರ ಕೆಂಗಣ್ಣಿಗೆ ಗುರಿ ಆಗಿದ್ದರು. ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ಅಶ್ಲೀಲವಾಗಿ ಮಾತನಾಡಿದ್ದ ಕಾರಣ ಹಲವು ದೂರುಗಳು ದಾಖಲಾಗಿದ್ದವು. ‘ದಿ ರಣ್ವೀರ್ ಶೋ’ ಯೂಟ್ಯೂಬ್ ಚಾನೆಲ್ ​ನಲ್ಲಿ ಹೊಸ ಸಂಚಿಕೆಗಳನ್ನು ಅಪ್​ಲೋಡ್ ಮಾಡದಂತೆ ತಡೆ ನೀಡಲಾಗಿತ್ತು. ಆದರೆ ಈಗ ರಣ್ವೀರ್ ಅಲಹಾಬಾದಿಯಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

‘ದಿ ರಣ್ವೀರ್ ಶೋ’ ಹೊಸ ಎಪಿಸೋಡ್​ಗಳನ್ನು ಪ್ರಸಾರ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ. ಸಭ್ಯತೆ ಮತ್ತು ನೈತಿಕತೆ ಇರಬೇಕು ಎಂದು ಕೋರ್ಟ್​ ಸೂಚನೆ ನೀಡಿದೆ.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ರಣ್ವೀರ್​ ಅಲಹಾಬಾದಿಯಾ ಅತಿಥಿಯಾಗಿ ಹೋಗಿದ್ದಾಗ ತೀರ ಕೀಳುಮಟ್ಟದಲ್ಲಿ ಮಾತನಾಡಿದ್ದರು. ಸಭ್ಯ ಸಮಾಜ ತಲೆ ತಗ್ಗಿಸುವ ರೀತಿಯಲ್ಲಿತ್ತು ಅವರ ಹೇಳಿಕೆಗಳು. ಅದಕ್ಕಾಗಿ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಅವರ ಹೇಳಿಕೆಗಳನ್ನು ಕೋರ್ಟ್​ ಕೂಡ ಖಂಡಿಸಿದೆ.
‘ದಿ ರಣ್ವೀರ್​ ಶೋ’ ನಂಬಿಕೊಂಡೇ ತಮ್ಮ ಜೀವನ ಸಾಗುತ್ತಿದೆ. ಅಲ್ಲದೇ ತಾವು 280 ಜನರಿಗೆ ಇದರಿಂದ ಉದ್ಯೋಗ ನೀಡಿದ್ದು, ಅವರೆಲ್ಲರ ಜೀವನದ ದೃಷ್ಟಿಯಿಂದ ಶೋ ಮುಂದುವರಿಸಲು ಅವಕಾಶ ನೀಡಬೇಕು ಎಂದು ರಣ್ವೀರ್ ಅಲಹಾಬಾದಿಯಾ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಕೆಲವು ಷರತ್ತುಗಳ ಜೊತೆ ಶೋ ಮುಂದುವರಿಸಲು ಅನುಮತಿ ಕೊಟ್ಟಿದೆ.

ಈ ಶೋನಲ್ಲಿ ಪ್ರಸಾರ ಆಗುವ ವಿಷಯಗಳು ಎಲ್ಲ ವಯೋಮಾನದ ವೀಕ್ಷಕರು ನೋಡುವಂತೆ ನೈತಿಕತೆ ಮತ್ತು ಸಭ್ಯತೆಯನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್​ ಷರತ್ತು ವಿಧಿಸಿದೆ. ಅಲ್ಲದೇ ಈ ಎಪಿಸೋಡ್​ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಕೇಸ್ ಬಗ್ಗೆ ಯಾವುದೇ ಚರ್ಚೆ ಮಾಡುವಂತಿಲ್ಲ ಎಂದು ಕೂಡ ಆದೇಶಿಸಿದೆ. ರಣ್ವೀರ್ ಅಲಹಾಬಾದಿಯಾಗೆ ನೀಡಿದ ನಿರೀಕ್ಷಣಾ ಜಾಮೀನಿನ ಅವಧಿಯನ್ನು ಮುಂದಿನ ಆದೇಶದ ತನಕ ವಿಸ್ತರಣೆ ಮಾಡಲಾಗಿದೆ.

See also  ಉಪ್ಪಿನಂಗಡಿ: ನಿಯಂತ್ರಣ ಕಳೆದುಕೊಂಡ ಚಾಲಕ..! ಶಾಲಾ ಮಕ್ಕಳಿದ್ದ ಬಸ್ ಪಲ್ಟಿ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget