ಕೊಡಗುಕ್ರೀಡೆ/ಸಿನಿಮಾಕ್ರೈಂ

ವಿಮಾನ ತುರ್ತು ಭೂಸ್ಪರ್ಶ..! ಪ್ರಾಣಾಪಾಯದಿಂದ ಪಾರಾದ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದೇನು..?

156

ನ್ಯೂಸ್‌ ನಾಟೌಟ್‌: ಶೂಟಿಂಗ್‌ಲ್ಲಿ ಬ್ಯುಸಿಯಾಗಿರುವ ನ್ಯಾಷನಲ್‌ ಕ್ರಷ್‌ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ಮುಂಬೈಗೆ ತೆರಳಿದ್ದರು. ಬಳಿಕ ತಮ್ಮ ಚಿತ್ರೀಕರಣ ಪೂರ್ಣಗೊಳಿಸಿ ಹೈದರಾಬಾದ್‌ಗೆ ವಾಪಸ್ಸಾಗಲು ವಿಮಾನ ಹತ್ತಿದ್ದು, ಈ ವಿಮಾನ ತಾಂತ್ರಿಕ ಸಮಸ್ಯೆ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.

ಸದ್ಯ ಪ್ರಾಣಾಪಾಯದಿಂದ ಪಾರಾದ ರಶ್ಮಿಕಾ ಮಂದಣ್ಣ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಈ ವಿಚಾರವನ್ನು ರಶ್ಮಿಕಾ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಮಾನದಲ್ಲಿ ಶ್ರದ್ಧಾ ದಾಸ್ ಕೂಡ ಪ್ರಯಾಣ ಮಾಡುತ್ತಿದ್ದರು. ಶ್ರದ್ಧಾ ದಾಸ್ ಜೊತೆಗಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡು, “ಇಂದು ಪ್ರಾಣಾಪಾಯದಿಂದ ಪಾರಾಗಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ಇದನ್ನು ನೋಡಿದ ಅಭಿಮಾನಿಗಳು ಸಾವಿರ ಪ್ರಶ್ನೆ ಮಾಡಿದ್ದಾರೆ. ಇದೀಗ ಬಹುಭಾಷೆಗಳಲ್ಲೂ ಸದ್ದು ಮಾಡುತ್ತಿರುವ ರಶ್ಮಿಕಾ ಇತ್ತೀಚೆಗಷ್ಟೇ ತೆರೆಕಂಡ ‘ಅನಿಮಲ್’ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಇದು ಜನಪ್ರಿಯತೆ ಹೆಚ್ಚಿಸಿದೆ. ಇನ್ನು ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2ನಲ್ಲಿ ಕಾರ್ಯನಿರತರಾಗಿದ್ದಾರೆ.

https://newsnotout.com/2024/02/lion-naming-highcourt/
See also  ಸುಳ್ಯ: ಬೈಕ್ ಗುದ್ದಿ ರಿಕ್ಷಾ ಪಲ್ಟಿ, ಅಪಘಾತ ಆಗಿದ್ದೇಗೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget