ದೇಶ-ವಿದೇಶವೈರಲ್ ನ್ಯೂಸ್

ರತನ್ ಟಾಟಾ ಆಸೆಯಂತೆ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜನೆಗೆ ತಯಾರಿ, ಹಡಗಿನಲ್ಲಿ ಮೆರವಣಿಗೆ..!

155

ನ್ಯೂಸ್ ನಾಟೌಟ್: ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.

ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ (Mumbai) ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.

ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರತನ್ ಟಾಟಾ ಮುಂಬೈ ನಗರದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಜೊತೆಗೆ ತಮ್ಮ ಜೀವನದ ಬಹುಪಾಲು ದಿನಗಳನ್ನು ಅವರು ಅಲ್ಲಿಯೇ ಕಳೆದಿದ್ದು, ಟಾಟಾ ಗ್ರೂಪ್ಸ್ ಎಂಬ ವ್ಯವಹಾರ ಸಾಮ್ರಾಜ್ಯಕ್ಕೆ ಮುಂಬೈನಲ್ಲಿ ಅಡಿಪಾಯ ಹಾಕಿದ್ದರು.

See also  ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ತಾಯಿಯೇ ಪ್ರಿಯಕರನ ಜೊತೆ ಸೇರಿ ಮಗುವನ್ನು ಕೊಂದಳಾ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget