ನ್ಯೂಸ್ ನಾಟೌಟ್: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ತಡರಾತ್ರಿ ನಡೆದಿದೆ.
ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ಯುವಕ ಎಂದು ಗುರುತಿಸಲಾಗಿದೆ.
ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.