Latestಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

RCB ಇವೆಂಟ್ ಮ್ಯಾನೇಜ್‌ ಮೆಂಟ್‌ ಕಂಪನಿ ಮುಖ್ಯಸ್ಥ ನಾಪತ್ತೆ..! ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿ..!

358

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐಆರ್‌ (FIR) ದಾಖಲಾಗುತ್ತಿದ್ದಂತೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ (DNA) ಮಾಲೀಕ ನಾಪತ್ತೆಯಾಗಿದ್ದಾರೆ.

ಕರ್ನಾಟಕದ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ವೆಂಕಟ್‌ ವರ್ಧನ್‌ ಡಿಎನ್‌ ಎ ಕಂಪನಿಯ ಮುಖ್ಯಸ್ಥರಾಗಿದ್ದಾರೆ. ಸಿಎಂ ಸೂಚನೆಯ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಂತೆ ವೆಂಕಟ್‌ ವರ್ಧನ್‌ ನಾಪತ್ತೆಯಾಗಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಮತ್ತು ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ ಎ ಮೇಲೆ ಎಫ್‌ ಐಆರ್‌ (FIR) ದಾಖಲಾಗಿದೆ.

ಡಿಎನ್‌ ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ನ ಓಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್‌ ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್‌ ಬಂಧನವಾಗಿದ್ದರೆ ಕೆಎಸ್‌ ಸಿಎ ಪ್ರತಿನಿಧಿಯ ಹೆಸರು ಬಹಿರಂಗವಾಗಿಲ್ಲ ಎಂದು ವರದಿ ತಿಳಿಸಿದೆ.

ಆರ್‌ ಸಿಬಿ ಫ್ರಾಂಚೈಸಿ ಮತ್ತು ಕೆಎಸ್‌ ಸಿಎ ವಿರುದ್ಧ FIR..! ವಿಜಯೋತ್ಸವ ಆಚರಣೆಗೆ KSCA ಕೇಳಿದ ಒಪ್ಪಿಗೆಯನ್ನು ಸರ್ಕಾರ ತಯಾರಿಯೇ ಇಲ್ಲದೆ ಅನುಮತಿ ನೀಡಿತ್ತು..!

See also  ಅರಂತೋಡು: ಸುಹಾಸ್ ಶೆಟ್ಟಿ ಸಾವಿಗೆ ನ್ಯಾಯ ಸಿಗಬೇಕೆಂಬ ಒತ್ತಾಯ, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ
  Ad Widget   Ad Widget     Ad Widget   Ad Widget   Ad Widget   Ad Widget