Latestಕ್ರೀಡೆಕ್ರೀಡೆ/ಸಿನಿಮಾಕ್ರೈಂರಾಜ್ಯವೈರಲ್ ನ್ಯೂಸ್

RCB ಗೆಲುವಿನ ಸಂಭ್ರಮಾಚರಣೆ ವೇಳೆ ಅಭಿಮಾನಿಗೆ ಹೃದಯಾಘಾತ..! ಅನಾಥರಾದ 6 ತಿಂಗಳ ಹೆಣ್ಣು ಮಗು ಮತ್ತು ಗರ್ಭಿಣಿ ಪತ್ನಿ..!

433

ನ್ಯೂಸ್ ನಾಟೌಟ್: ಬೆಳಗಾವಿಯ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ, ಆರ್‌ ಸಿಬಿ ವಿಜಯೋತ್ಸವದ ಸಂಭ್ರಮದಲ್ಲಿ ಕುಣಿಯುತ್ತಿರುವಾಗ ಹೃದಯಘಾತದಿಂದ ಯುವಕ ಸಾವಿಗೀಡಾಗಿದ್ದಾನೆ.

ಆರ್‌ ಸಿಬಿ ಕಟ್ಟಾ ಅಭಿಮಾನಿಯಾಗಿದ್ದ ಮಂಜುನಾಥ ಈರಪ್ಪ ಕಂಬಾರ (28) ಸಾವಿಗೀಡಾದವರು ಎಂದು ಗುರುತಿಸಲಾಗಿದೆ. ಅವರಾದಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕುಣಿಯುತ್ತಲೇ ಕುಸಿದು ಬಿದ್ದಿರು.

ಫೈನಲ್‌ ಪಂದ್ಯ ವೀಕ್ಷಣೆಗೆ ಮಂಗಳವಾರ ಬೃಹತ್‌ ಎಲ್‌ ಇಡಿ ಪರದೆಯ ವ್ಯವಸ್ಥೆಯನ್ನು ಅವರೇ ಮಾಡಿದ್ದರು. ಇದಕ್ಕಾಗಿ ನಾಲ್ಕು ದಿನಗಳಿಂದ ಊಟ, ನಿದ್ದೆ ಬಿಟ್ಟು ಓಡಾಡಿದ್ದರು. ಪಟಾಕಿ, ಗುಲಾಲು ಎಲ್ಲವನ್ನು ಖರೀದಿಸಿ ತಂದಿದ್ದರು.

ಗ್ರಾಮದಲ್ಲಿ ‘ಅವರಾದಿ ವಾರಿಯರ್ಸ್‌’ ಎಂಬ ತಂಡ ಕಟ್ಟಿಕೊಂಡು ಟೂರ್ನಿಗಳಲ್ಲಿ ಭಾಗವಹಿಸುತ್ತಿದ್ದರು. ನೆಚ್ಚಿನ ತಂಡ ಕಪ್‌ ಗೆದ್ದಿದ್ದನ್ನು ಕಂಡು ಯುವಕರು ಹುಚ್ಚೆದ್ದು ಕುಣಿದಾಡಿದರು. ಮಂಜುನಾಥ ಕೂಡ ಮೈ ಮರೆತು ಸಂಭ್ರಮಿಸುವಾಗಲೇ ಹೃದಯ ಸ್ತಂಭನವಾಗಿದೆ. ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ ಎನ್ನಲಾಗಿದೆ. ಮಂಜುನಾಥಗೆ 6 ತಿಂಗಳ ಹೆಣ್ಣು ಮಗು ಇದೆ. ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಮಂಗಳೂರು: ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಬೊಟ್ಯಾಡಿಗೆ ಗನ್‌ ಮ್ಯಾನ್‌ ಒದಗಿಸಿದ ರಾಜ್ಯ ಸರ್ಕಾರ..! ಗುಪ್ತಚರ ಇಲಾಖೆಯ ಮಾಹಿತಿ..!

RCB ಗೆಲುವಿನ ಸಂಭ್ರಮಾಚರಣೆ ವೇಳೆ 21ರ ಯುವಕ ಸಾವು..! ತಡರಾತ್ರಿ ಯುವಕರ ಬೈಕ್‌ ಜಾಥಾದಲ್ಲಿ ಅಪಘಾತ..!

See also  ಡೀಸೆಲ್ ದರ ಏರಿಕೆ ಖಂಡಿಸಿ ಇಂದು(ಎ.14) ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ..! ರಾಜ್ಯಾದ್ಯಂತ ಸುಮಾರು 6 ಲಕ್ಷ ಲಾರಿಗಳ ಸಂಚಾರ ಬಂದ್‌..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget