ನ್ಯೂಸ್ ನಾಟೌಟ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಅಂತರದಿಂದ ರೋಚಕವಾಗಿ ಮಣಿಸಿತು. ಆರ್ಸಿಬಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ತಂಡದ ಆಟಗಾರರು, ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿಗೆ ಸನ್ಮಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು(ಜೂ.4) ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹ್ಮದಾಬಾದ್ ನಿಂದ ಆರ್ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ.
ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್ ಸಾಗಲಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಆರ್ ಸಿಬಿ ತಂಡದ ಆಟಗಾರರು, ತರಬೇತುದಾರರು, ವ್ಯವಸ್ಥಾಪಕರು ಸೇರಿದಂತೆ ತಂಡದ ಸದಸ್ಯರನ್ನು ಸನ್ಮಾನಿಸಲಿದ್ದಾರೆ ಎಂದು ವರದಿ ತಿಳಿಸಿದೆ.
RCB ಗೆಲುವಿನ ಸಂಭ್ರಮಾಚರಣೆ ವೇಳೆ ಅಭಿಮಾನಿಗೆ ಹೃದಯಾಘಾತ..! ಅನಾಥರಾದ 6 ತಿಂಗಳ ಹೆಣ್ಣು ಮಗು ಮತ್ತು ಗರ್ಭಿಣಿ ಪತ್ನಿ..!