ಕ್ರೀಡೆ/ಸಿನಿಮಾಕ್ರೈಂಬೆಂಗಳೂರುವೈರಲ್ ನ್ಯೂಸ್

ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್..! ಯಾರು ಈ ಅಪ್ರಾಪ್ತ ಯುವಕ..?

183

ನ್ಯೂಸ್‌ ನಾಟೌಟ್‌ : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಮವಾರ ರಾತ್ರಿ(ಮಾ.25) ನಡೆದ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಿನ ಐಪಿಎಲ್ (IPL) ಪಂದ್ಯದಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ ನಡೆದಿದೆ.

ಆರ್​ಸಿಬಿಯ ಸ್ಟಾರ್ ಆಟಗಾರ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದಿದ್ದ! ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಆತನ ವಿರುದ್ಧ ಪ್ರಕರಣವನ್ನೂ ದಾಖಲಿಸಿದ್ದಾರೆ.ಮೈದಾನಕ್ಕೆ ನುಗ್ಗಿ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿಯ ವಿಚಾರಣೆ ನಡೆಸಲಾಗಿದ್ದು, ಆತ ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬುದು ತಿಳಿದುಬಂದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ ಅಪ್ರಾಪ್ತ, 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದ.

ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್​​ ತಂಡ ನೀಡಿದ್ದ 177 ರನ್​ಗಳ ಗೆಲುವಿನ ಗುರಿಯನ್ನು ಬೆನ್ನತ್ತಲು ಕೊಹ್ಲಿ ಹಾಗೂ ಡುಪ್ಲೆಸಿಸ್ ಕ್ರೀಸ್​ಗೆ ತೆರಳುತ್ತಿದ್ದರು. ಅಷ್ಟರಲ್ಲಿ ಯುವಕ ಮೈದಾನಕ್ಕೆ ಜಿಗಿದಿದ್ದ. ಆ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಆತ, ಕೊಹ್ಲಿ ಕ್ರೀಸ್​ಗೆ ಹೋಗುತ್ತಿದ್ದಂತೆ ಹಿಂಬದಿ ಸೀಟ್​​ನಲ್ಲಿದ್ದವರು ‘ಕೊಹ್ಲಿಯನ್ನು ಹಿಡಿದುಕೋ’ ಎಂದು ಕೂಗುತ್ತಿದ್ದರು. ಅದನ್ನು ಕೇಳಿದ ತಕ್ಷಣ ಗ್ರಿಲ್​ ಹಾರಿ ಮೈದಾನದ ಒಳಗೆ ನುಗ್ಗಿದ್ದೆ ಎಂದಿದ್ದಾನೆ.ಇದೀಗ ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್​ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ.

See also  ರತನ್ ಟಾಟಾ ಆಸೆಯಂತೆ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜನೆಗೆ ತಯಾರಿ, ಹಡಗಿನಲ್ಲಿ ಮೆರವಣಿಗೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget