Latestಕ್ರೀಡೆಕ್ರೀಡೆ/ಸಿನಿಮಾಬೆಂಗಳೂರುರಾಜಕೀಯ

ಆರ್‌ ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡ ಬಾವುಟ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್, ರಸ್ತೆಯುದ್ದಕ್ಕೂ ಕಿಕ್ಕಿರಿದು ನೆರೆದ ಅಭಿಮಾನಿಗಳು

648

ನ್ಯೂಸ್‌ ನಾಟೌಟ್‌: 18ನೇ ಐಪಿಎಲ್‌ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ ಸಿಬಿ ತಂಡ ಬುಧವಾರ(ಜೂ.4) ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಸರ್ಕಾರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆದಿದೆ.

ಆರ್‌ ಸಿಬಿ ತಂಡದ ಆಟಗಾರರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ವಾಗತ ಕೋರಿದರು. ಈ ವೇಳೆ, ಆರ್‌ ಸಿಬಿ ಸ್ಟಾರ್‌ ವಿರಾಟ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿ ಸ್ವಾಗತಿಸಲಾಯಿತು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್‌ ಖುಷಿಪಟ್ಟರು.

ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇದೆ. ಈ ಹಿನ್ನೆಲೆಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದಾರೆ.

ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳ ರೋಚಕ ಜಯ ಸಾಧಿಸಿತು. ಆ ಮೂಲಕ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್‌ ಟ್ರೋಫಿ ಎತ್ತಿ ಹಿಡಿಯಿತು. ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು.

ಭದ್ರತೆ ದೃಷ್ಟಿಯಿಂದ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದ ಗೃಹ ಸಚಿವ..! ವಿಧಾನಸೌಧದ ಮುಂಭಾಗ ಅಭಿನಂದನಾ ಕಾರ್ಯಕ್ರಮ

See also  ಪುತ್ತೂರು ಬ್ಯಾನರ್ ಪ್ರಕರಣ: ಬ್ಯಾನರ್ ಹಾಕಿದವರ ವಿರುದ್ಧ ನಾವು ದೂರು ಕೊಟ್ಟಿಲ್ಲ,ಪೊಲೀಸರ ಮೇಲೆ ಒತ್ತಡ ಹಾಕಿಲ್ಲ –ಕಟೀಲ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget