ನ್ಯೂಸ್ ನಾಟೌಟ್: 18ನೇ ಐಪಿಎಲ್ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ ಸಿಬಿ ತಂಡ ಬುಧವಾರ(ಜೂ.4) ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಸರ್ಕಾರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆದಿದೆ.
ಆರ್ ಸಿಬಿ ತಂಡದ ಆಟಗಾರರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಕೋರಿದರು. ಈ ವೇಳೆ, ಆರ್ ಸಿಬಿ ಸ್ಟಾರ್ ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ನೀಡಿ ಸ್ವಾಗತಿಸಲಾಯಿತು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್ ಖುಷಿಪಟ್ಟರು.
ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇದೆ. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದಾರೆ.
Welcome Home Boys♥️🏆
18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ.
ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ!
Truly an honour to welcome you all to #NammaBengaluru!… pic.twitter.com/u3mnRjKp2O
— DK Shivakumar (@DKShivakumar) June 4, 2025
ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್ಸಿಬಿ 6 ರನ್ಗಳ ರೋಚಕ ಜಯ ಸಾಧಿಸಿತು. ಆ ಮೂಲಕ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಿತು. ಆರ್ಸಿಬಿ ಅಭಿಮಾನಿಗಳ ಪಾಲಿಗೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು.