ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ..!

4

ಬೆಂಗಳೂರು: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರಗೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ಸನ್ನಿವೇಶ ಬುಧವಾರ ನಡೆಯಿತು. ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗಿದೆ. ಸಚಿವ ಸ್ಥಾನ ಕೈತಪ್ಪುತ್ತಿದ್ದಂತೆ  ಬಿಎಸ್ ವೈ ಭೇಟಿ ಮಾಡಿರುವ ರೇಣುಕಾಚಾರ್ಯ ಎರಡು ಗಂಟೆಗೂ ಹೆಚ್ಚು ಹೊತ್ತು ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದಾರೆ. ಮಾತುಕತೆ ವೇಳೆ ಭಾವುಕರಾಗಿದ್ದ ರೇಣುಕಾಚಾರ್ಯ ಒಂದು ಹಂತದಲ್ಲಿ ಗದ್ಗತಿಕರಾಗಿ ಕಣ್ಣೀರಿಟ್ಟಿದ್ದಾರೆ. ನಾನು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ ಆದರೂ ಸಚಿವ ಸ್ಥಾನ ಕೈತಪ್ಪಿರುವುದು ಯಾಕೆ ? ನಾನು ಮಾಡಿರುವ ತಪ್ಪಾದರೂ ಏನು ? ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ? ಹೀಗೆ ಬಿಎಸ್ ವೈ ಮುಂದೆ ಭಾವುಕರಾಗಿ ರೇಣುಕಾಚಾರ್ಯ ಮಾತನಾಡಿದ್ದಾರೆ. ಈ ವೇಳೆ ಶಾಸಕರನ್ನ ಸಮಾಧಾನಪಡಿಸಲು ಮುಂದಾದ ಬಿಎಸ್ ವೈ…ಎಲ್ಲವೂ ಮುಗಿದೇ ಹೋಯ್ತು ಅಂತಾ ಭಾವಿಸುವುದು ಬೇಡ ಪಕ್ಷದಲ್ಲಿ ಮುಂದೆ ಒಳ್ಳೆಯ ಭವಿಷ್ಯವಿದೆ ಮುಂದೆ ಒಳ್ಳೆಯ ಅವಕಾಶ ಸಿಗಲಿದೆ ಎಂದು ಯಡಿಯೂರಪ್ಪ ಸಮಾಧಾನ ಪಡಿಸಿದ್ದಾರೆ.

Related Articles

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ಶೀಲ ಶಂಕಿಸಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ..! ಆರೋಪಿ ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್: ಶೀಲ ಶಂಕಿಸಿ ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಆನೇಕಲ್ ಹೆಬ್ಬಗೋಡಿ...

Uncategorizedಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ...

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ರಥೋತ್ಸವದ ವೇಳೆ ಗುರುಬಸವೇಶ್ವರ ರಥದ ಸ್ಟೇರಿಂಗ್ ಕಟ್..! ಸ್ಕೂಟಿ ಹಾಗೂ ಬೈಕ್‌ ಗಳು ರಥದಡಿಗೆ ಸಿಲುಕಿ ಅಪ್ಪಚ್ಚಿ..!

ನ್ಯೂಸ್ ನಾಟೌಟ್ : ವಿಜಯನಗರ ಜಿಲ್ಲೆಯ ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅವಘಡ ಸಂಭವಿಸಿದ್ದು,...

@2025 – News Not Out. All Rights Reserved. Designed and Developed by

Whirl Designs Logo