ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್..! ಜಾಮೀನಿಗೆ ಹಣ ಕಟ್ಟಲಾಗದೆ ಕುಟುಂಬಸ್ಥರ ಪರದಾಟ..!

167

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. (Darshan Thoogudeepa)

ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು ಎನ್ನಲಾಗಿದೆ.

ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Click

https://newsnotout.com/2024/10/14-hindu-temple-kannada-news-sai-baba-kannada-news-viral-news/
See also  ಪಟಾಕಿ ಸ್ಫೋಟಕ್ಕೆ ಕಾಸರಗೋಡಿನ ಯುವಕ ಬಲಿ, ಒಂದೇ ಒಂದು ಕಿಡಿಯಿಂದ ಸಂಭವಿಸಿತು ಮಹಾ ದುರಂತ
  Ad Widget   Ad Widget   Ad Widget   Ad Widget   Ad Widget   Ad Widget   Ad Widget