ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ಎನ್ನೆಂಸಿಯ ಯುವ ರೆಡ್‌ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ

162

ನ್ಯೂಸ್ ನಾಟೌಟ್: ಮನುಷ್ಯನ ಜೀವನ ಅತ್ಯಂತ ಅಮೂಲ್ಯವಾದುದು. ಕೆಟ್ಟ ಚಟಗಳಿಗೆ ಬಲಿಯಾಗದೆ ಅತ್ಯಂತ ಜೋಪಾನವಾಗಿ ಕಾಪಾಡಿಕೊಳ್ಳಬೇಕಾಗಿದೆ. ವಾಹನ ಚಲಾಯಿಸುವ ಸಂದರ್ಭ ಚಾಲಕರು ತಮ್ಮ ಮನೆಯ ಸದಸ್ಯರನ್ನು ನೆನಪು ಮಾಡಿಕೊಳ್ಳಬೇಕು. ದ್ವಿಚಕ್ರ ಸವಾರರು ತಮ್ಮ ಜೀವರಕ್ಷಣೆಗಾಗಿ ಹೆಲ್ಮೆಟ್ ಬಳಸಿ, ಪೊಲೀಸರಿಗಾಗಿ ಹೆಲ್ಮೆಟ್ ಧರಿಸಬೇಡಿ ಎಂದು ಸುಳ್ಯ ಆರಕ್ಷಕ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಜ್ಯೋತಿ ಕೆ.ವಿ. ಕಿವಿ ಮಾತು ಹೇಳಿದರು.

ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದವರು ಹಮ್ಮಿಕೊಂಡ “ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ” ಮಾತನಾಡಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕಾರ್ಯದರ್ಶಿ ಹೇಮನಾಥ್ ಕೆ.ವಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ.ಎಂ., ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್, ಪೊಲೀಸ್ ಕಾನ್‌ಸ್ಟೇಬಲ್ ದಿನೇಶ್, ಯುವ ರೆಡ್‌ಕ್ರಾಸ್ ಘಟಕದ ನಾಯಕ ಷಣ್ಮುಖ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕ ಮಾತನಾಡಿದರು. ಘಟಕ ನಾಯಕಿ ದೀಕ್ಷಾ ಎನ್ ಆರ್ ಸ್ವಾಗತಿಸಿ, ಸದಸ್ಯರಾದ ಪವನ್ ವಂದಿಸಿ, ರಿಷಿತಾ ಎ. ಕಾರ್ಯಕ್ರಮ ನಿರೂಪಿಸಿದರು.

ರೆಡ್‌ಕ್ರಾಸ್ ಸದಸ್ಯರು ಪಾಲ್ದಗೊಂಡಿದ್ದರು.

See also  ಸುಳ್ಯ ತಾಲೂಕು ಮಟ್ಟದ 'ಶ್ರೇಷ್ಠ ಕೃಷಿಕ ಪ್ರಶಸ್ತಿ',ಗೋವಿಂದ ನಾಯ್ಕರಿಗೆ ಪ್ರದಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget