ಕ್ರೀಡೆ/ಸಿನಿಮಾಕ್ರೈಂಬೆಂಗಳೂರುವೈರಲ್ ನ್ಯೂಸ್

ರಾಕ್​​ಲೈನ್ ವೆಂಕಟೇಶ್ ಮಾಲ್ ಬೀಗಮುದ್ರೆ ತೆರೆಯಲು ಹೈಕೋರ್ಟ್ ಸೂಚನೆ, 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ, ರಾಕ್ ಲೈನ್ ಪುತ್ರನಿಂದ ಅವಾಜ್..!

198

ನ್ಯೂಸ್ ನಾಟೌಟ್: ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮಾಲಕತ್ವದ ರಾಕ್​​ಲೈನ್ ಮಾಲ್ ಬೀಗಮುದ್ರೆ ಹಾಕಿದ್ದನ್ನು ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್​​ಲೈನ್ ಮಾಲ್​ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು‌ ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್​ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು.

ಆದರೆ ನೋಟಿಸ್ ನೀಡಿಯೂ ಬಾಕಿ ಪಾವತಿಸದ ಹಿನ್ನೆಲೆ ಮಾಲ್​​ಗೆ ಬೀಗ ಹಾಕಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಕ್​ಲೈನ್ ಮಾಲ್ ಮ್ಯಾನೇಜರ್ ಪ್ರಕಾಶ್, ನಮಗೆ ನೋಟಿಸ್ ಕೊಡದೇ ಮಾಲ್​ಗೆ ಬೀಗ ಹಾಕಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ರಾಕ್​ಲೈನ್ ವೆಂಕಟೇಶ್​ ಪುತ್ರ ಯತೀಶ್ ಅಧಿಕಾರಿಗಳಿಗೆ ಆವಾಜ್ ಹಾಕಿದ್ದರು. ಮಾಲ್ ಏನು ನಿಮ್ಮಪ್ಪಂದಾ ಅಂತಾ ಅಧಿಕಾರಿಗಳನ್ನು ನಿಂದಿಸಿದ್ದರು.

ಬಾಗಿಲು ಹಾಕು ಅಂತೀಯಾ, ಆದೇಶ ಪ್ರತಿ ಎಲ್ಲಿ ಎಂದು ಕಿರಿಕ್ ತೆಗೆದಿದ್ದರು. ಬಿಬಿಎಂಪಿ ಎಆರ್​​ಒ ರಮೇಶ್​ಗೆ ಹಿಗ್ಗಾಮುಗ್ಗಾ ಆವಾಜ್ ಹಾಕಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ದಾಸರಹಳ್ಳಿ ವಲಯ ಅಪರ ಆಯುಕ್ತ ಬಾಲಶೇಖರ್ ಮಾತನಾಡಿ, 2011ರಿಂದ 11 ಕೋಟಿ 51 ಲಕ್ಷ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. 11 ವರ್ಷದಿಂದ ತೆರಿಗೆ ಕಟ್ಟಿಲ್ಲ. ಒಮ್ಮೆ ಒಂದು ಬಾರಿ 1 ಕೋಟಿ 10 ಲಕ್ಷ ರೂ. ಕಟ್ಟಿದ್ದಾರೆ. 26 ಲಕ್ಷ ರೂ. ಚೆಕ್ ಕೊಟ್ಟಿದ್ದರು. ಈಗ ನೋಟಿಸ್ ಕೊಟ್ಟಿದ್ದೇವೆ ಆದರೂ ಕಟ್ಟಿಲ್ಲ. ಹೀಗಾಗಿ ಸೀಲ್ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಸಿಎಂ ಸಿದ್ದು ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ್ರಾ..? ಯತ್ನಾಳ್‌ ಮಾಡಿದ ಆರೋಪಗಳೇನು, ನೀಡಿದ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget