Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

RSS ಕಚೇರಿ ಮೇಲಿನ ದಾಳಿಯ ಪ್ರಮುಖ ಆರೋಪಿ ಪಾಕ್‌ ನಲ್ಲಿ ನಿಗೂಢ ಹತ್ಯೆ..!ಅಪರಿಚಿತ ಗುಂಪಿಂದ ದಾಳಿ..!

841

ನ್ಯೂಸ್‌ ನಾಟೌಟ್: ಭಾರತದಲ್ಲಿ ನಡೆದ 3 ಪ್ರಮುಖ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಭಾನುವಾರ(ಮೇ.18) ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಸೈಫುಲ್ಲಾ ಅಲಿಯಾಸ್ ವಿನೋದ್ ಕುಮಾರ್ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಖಾಲಿದ್ ಅಲಿಯಾಸ್ ವನಿಯಾಲ್ ಅಲಿಯಾಸ್ ವಾಜಿದ್ ಅಲಿಯಾಸ್ ಸಲೀಂ ಭಾಯ್ ಹೆಸರುಗಳಿಂದ ಈತ ಗುರುತಿಸಿಕೊಂಡಿದ್ದ. ಈ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರರನನ್ನು ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

2001 ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ ಪಿಎಫ್ ಶಿಬಿರದ ಮೇಲಿನ ದಾಳಿ, 2005 ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ನಡೆದಿದ್ದ ಗುಂಡಿನ ದಾಳಿ ಹಾಗೂ 2006 ರಲ್ಲಿ ನಾಗ್ಪುರದ ಆರ್‌ ಎಸ್‌ ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್‌ ಪ್ರಮುಖ ಸಂಚುಕೋರನಾಗಿದ್ದ ಎನ್ನಲಾಗಿದೆ.

ಬಾಂಗ್ಲಾದ ಮಾಜಿ ಪ್ರಧಾನಿಯ ಬಯೋಪಿಕ್‌ ನಲ್ಲಿ ನಟಿಸಿದ್ದ ನಟಿ ಅರೆಸ್ಟ್ ..! ಶೇಖ್ ಹಸೀನಾ ಪಾತ್ರದಲ್ಲಿ ಅಭಿನಯಿಸಿದ್ದಾಕೆ ಮೇಲೆ ಕೊಲೆ ಆರೋಪ.!

ಪ್ರಚಾರಕ್ಕಾಗಿ ‘ಆಪರೇಷನ್ ಸಿಂದೂರ್’ ವಿಷಯ ಬಳಸಿಕೊಂಡ ವೈದ್ಯ ಅಮಾನತ್ತು..! ತನಿಖೆಗೆ ಸಮಿತಿ ರಚಿಸಿದ ಆಸ್ಪತ್ರೆ..!

See also  ಹಿಜಾಬ್‌ ಧರಿಸದೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಕ್ಕೆ ಗಾಯಕಿ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget