ಕರಾವಳಿಸುಳ್ಯ

ಸಂಪಾಜೆ: ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಗುದ್ದಿದ ಲಾರಿ ಜಖಂ..!ಏನಿದು ಘಟನೆ?

ನ್ಯೂಸ್ ನಾಟೌಟ್ : ಸಂಪಾಜೆ ಭಾಗದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.ಅದರಲ್ಲೂ ಚಾಲಕನ ನಿಯಂತ್ರಣ ತಪ್ಪಿ ಅಥವಾ ಬ್ರೇಕ್ ವೈಫಲ್ಯಗಳಿಂದಾಗಿ ಹಲವಾರು ದುರ್ಘಟನೆಗಳು ನಡೆದಿರೋದನ್ನು ನಾವು ವರದಿಗಳ ಮೂಲಕ ತಿಳಿದು ಕೊಂಡಿದ್ದೇವೆ.ಇದೀಗ ಬ್ರೇಕ್ ವೈಫಲ್ಯದಿಂದಾಗಿ ಮತ್ತೊಂದು ದುರಂತ ಸಂಭವಿಸಿರುವ ಘಟನೆ ವರದಿಯಾಗಿದೆ.

ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ಸಂಪಾಜೆ ಬಳಿ ಬರುತ್ತಿದ್ದಂತೆ ಅಲ್ಲಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿ ಹೊಡೆದಿದೆ.ಈ ವೇಳೆ ಗೇಟ್ ಜಖಂಗೊಂಡಿದ್ದು,ಲಾರಿಗೂ ಹಾನಿಯಾಗಿರುವ ಘಟನೆ ಸಂಭವಿಸಿದೆ.

ಇಂದು ಮುಂಜಾನೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಲಾರಿಯ ಬ್ರೇಕ್ ವೈಫಲ್ಯಗೊಂಡು ಚಾಲಕನ ನಿಯಂತ್ರಣ ತಪ್ಪಿದೆ.ಬಳಿಕ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.ಫೋಟೋದಲ್ಲಿ ನೀವು ಗೇಟು ಹಾಗೂ ಲಾರಿಯ ಮುಂಭಾಗ ಜಖಂಗೊಂಡಿರುವುದನ್ನು ಕಾಣಬಹುದಾಗಿದೆ.

Related posts

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಪ್ರಣಾಳಿಕೆ ಬಿಡುಗಡೆ

ಅರಂತೋಡು: ತರಬೇತಿ ಕಾರ್ಯಾಗಾರದ ಕುರಿತು ಪೂರ್ವಭಾವಿ ಸಭೆ, ಯುವಜನ ಸಂಯುಕ್ತ ಮಂಡಳಿ(ರಿ) ಸುಳ್ಯ, ಸ್ಪಂದನ ಗೆಳೆಯರ ಬಳಗ (ರಿ) ಅಡ್ತಲೆ ಪದಾಧಿಕಾರಿಗಳು ಭಾಗಿ

ಪೆರುವಾಜೆ :ರಸ್ತೆ ಕಾಮಗಾರಿ ವೇಳೆ ಮನೆ ಸಮೀಪದ ಬೇಲಿ ನಾಶದ ಆರೋಪ, ಪಂಚಾಯತ್ ಸದಸ್ಯನ ವಿರುದ್ಧ ಪ್ರಕರಣ ದಾಖಲು