Uncategorized

ಮಡಿಕೇರಿ –ಮಂಗಳೂರು ಸಂಪರ್ಕಿಸುವ ಏಕೈಕ ರಸ್ತೆಯೂ ಬಂದ್‌..!

ನ್ಯೂಸ್ ನಾಟೌಟ್: ಮಡಿಕೇರಿ-ಮಂಗಳೂರು ಪರ್ಯಾಯ ರಸ್ತೆಗೂ ಕುಸಿತದ ಭೀತಿ ಎದುರಾಗಿದ್ದು ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ್ದಾರೆ. ಪರಿಣಾಮ  ಮಂಗಳೂರಿನಿಂದ ಮಡಿಕೇರಿ ಮೂಲಕ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತಿತರ ಸ್ಥಳಗಳಿಗೆ ಹೊರಟ ಎಲ್ಲ ಪ್ರಯಾಣಿಕರು ಇದೀಗ ಸಂಪಾಜೆಯ ಗೇಟ್ ಬಳಿ ಸಿಲುಕಿಕೊಂಡಿದ್ದಾರೆ. ಸಂಪಾಜೆ ಗೇಟ್ ಬಂದ್ ಮಾಡಲಾಗಿದ್ದು ಯಾವುದೇ ವಾಹನವನ್ನು ಮಡಿಕೇರಿ ಕಡೆಗೆ ಬಿಡುತ್ತಿಲ್ಲ ಎನ್ನುವ ಮಾಹಿತಿ ಇದೀಗ ನ್ಯೂಸ್ ನಾಟೌಟ್ ತಂಡಕ್ಕೆ ಲಭ್ಯವಾಗಿದೆ.

ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಸಮೀಪದ ಜಿಲ್ಲಾಧಿಕಾರಿ ಕಚೇರಿ ಬಳಿ ಕುಸಿಯುವ ಭೀತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರವನ್ನು ಆ ಮಾರ್ಗದಲ್ಲಿ ನಿಷೇಧಿಸಲಾಗಿದೆ. ದೂರದ ಊರಿಗೆ ಪ್ರಯಾಣ ಬಳಸುವವರಿಗೆ ತಾತ್ಕಾಲಿಕವಾಗಿ ತಾಳತ್ತಮನೆ ಮೂಲಕ ಮೇಕೆರಿಯಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಲಾಗಿದೆ. ಇದೀಗ ಮೆಕೇರಿ ಬಳಿ ರಸ್ತೆಯೂ ಕುಸಿತದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಾಹನ ಸಂಚಾರ ಮಾಡದಂತೆ ತಡೆ ಹಿಡಿದಿದ್ದಾರೆ. ಪರಿಣಾಮ ಸಂಪಾಜೆ ಗೇಟ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ.

Related posts

ನಾಳೆ ಪೆಟ್ರೋಲ್, ಡೀಸೆಲ್ ಸಿಗಲ್ಲ..!

ಕಾರು-ಟ್ಯಾಂಕರ್ ನಡುವೆ ಡಿಕ್ಕಿ, 10 ದಿನ ಹಿಂದೆಯಷ್ಟೇ ಮದುವೆಯಾಗಿದ್ದ ವಧು-ವರ ಮೃತ್ಯು

ಪ್ರತಿಷ್ಠಿತ ಪಿ.ಇ.ಎಸ್. ಯುನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿ ಸುಳ್ಯದ ಅಕ್ಷರ ದಾಮ್ಲೆ ನೇಮಕ, ಕೊಳೆಗೇರಿಗಳಲ್ಲಿರುವವರಿಗೆ ಉಚಿತ ಮಾನಸಿಕ ಚಿಕಿತ್ಸೆ ನೀಡಿದ್ದ ಅಕ್ಷರ ದಾಮ್ಲೆಗೆ ಉನ್ನತ ಸ್ಥಾನ