Latest

ಚಿತ್ರ ನಟಿ ಸೌಂದರ್ಯ ಸಾವಿನ ಬಗ್ಗೆ ಅನುಮಾನ: ಪತಿ ರಘು ಹೇಳಿದ್ದೇನು?

667

ನ್ಯೂಸ್‌ ನಾಟೌಟ್: ನಟಿ ಸೌಂದರ್ಯ ಸಾವು 20 ವರ್ಷದ ಬಳಿಕ ಮತ್ತೆ ಮುನ್ನಲೆಗೆ ಬಂದಿದೆ. ಸೌಂದರ್ಯ 2004 ರಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ನಿಧನ ಹೊಂದಿದ್ದರು. ಸೌಂದರ್ಯ ಜೊತೆಗೆ ಅವರ ಸಹೋದರ ಸಹ ಅದೇ ದುರ್ಘಟನೆಯಲ್ಲಿ ನಿಧನ ಹೊಂದಿದ್ದರು. ಆದರೆ ಕೆಲ ದಿನದ ಹಿಂದಷ್ಟೆ ತೆಲಂಗಾಣದ ಖಮ್ಮಂ ಜಿಲ್ಲೆ, ಸತ್ಯನಾರಾಯಣಪುರ ಗ್ರಾಮದ ಎದುರುಗಟ್ಲ ಚಿಟ್ಟಿಬಾಬು ಎಂಬಾತ ಪೊಲೀಸರಿಗೆ ದೂರು ನೀಡಿದ್ದು, ಆಸ್ತಿಯ ಆಸೆಗಾಗಿ ನಟಿ ಸೌಂದರ್ಯ ಅನ್ನು ತೆಲುಗು ಚಿತ್ರರಂಗದ ದಿಗ್ಗಜ ನಟ ಮೋಹನ್ ಬಾಬು ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆ ಸುದ್ದಿ ಸಂಚಲನವಾಗಿ ಮಾರ್ಪಾಡಾಗಿದೆ. ಈ ಬಗ್ಗೆ ಸೌಂದರ್ಯ ಅವರ ಪತಿ ಜಿಎಸ್​ ರಘು ಪ್ರತಿಕ್ರಿಯೆ ನೀಡಿದ್ದಾರೆ.

ಕೆಲ ತೆಲುಗು ಮಾಧ್ಯಮಗಳು ಸೌಂದರ್ಯ ಅವರ ಪತಿ ಜಿಎಸ್​ ರಘು ಅವರ ಪ್ರತಿಕ್ರಿಯೆಯನ್ನು ಪ್ರಕಟಿಸಿದ್ದು, ‘ಮೋಹನ್ ಬಾಬು ಅವರು ಸೌಂದರ್ಯ ಅವರ ಕೊಲೆ ಮಾಡಿಸಿದ್ದಾರೆ ಎಂಬ ಆಧಾರ ಪೂರ್ಣವಾಗಿ ಸುಳ್ಳು, ಆಧಾರರಹಿತ’ ಎಂದಿದ್ದಾರೆ. ಮೋಹನ್ ಬಾಬು ಅವರು ಅಕ್ರಮವಾಗಿ ಸೌಂದರ್ಯ ಅವರ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನೂ ತಳ್ಳಿ ಹಾಕಿರುವ ರಘು, ‘ಕಳೆದ ಕೆಲವು ದಿನಗಳಿಂದ ಹೈದರಾಬಾದ್‌ನಲ್ಲಿರುವ ಮೋಹನ್ ಬಾಬು ಮತ್ತು ಶ್ರೀಮತಿ ಸೌಂದರ್ಯ ಅವರ ಆಸ್ತಿಯ ಬಗ್ಗೆ ಸುಳ್ಳು ಸುದ್ದಿಗಳು ಹರಡುತ್ತಿದೆ. ಆಸ್ತಿಯ ಬಗ್ಗೆ ಹರಡಿರುವ ಆಧಾರರಹಿತ ಸುದ್ದಿಯನ್ನು ನಾನು ನಿರಾಕರಿಸುತ್ತೇನೆ. ಮೋಹನ್ ಬಾಬು, ನನ್ನ ಪತ್ನಿ ದಿವಂಗತ ಶ್ರೀಮತಿ ಸೌಂದರ್ಯ ಅವರಿಂದ ಅಕ್ರಮವಾಗಿ ಯಾವುದೇ ಆಸ್ತಿಯನ್ನು ವಶಪಡಿಸಿಕೊಂಡಿಲ್ಲ ಎಂದು ನಾನು ದೃಢೀಕರಿಸುತ್ತೇನೆ. ನನಗೆ ತಿಳಿದ ಮಟ್ಟಿಗೆ ನಾವು ಅವರೊಂದಿಗೆ ಯಾವುದೇ ಭೂ ವ್ಯವಹಾರಗಳನ್ನು ನಡೆಸಿಲ್ಲ’ ಎಂದಿದ್ದಾರೆ.

‘ಮೋಹನ್ ಬಾಬು ಅವರು ನನಗೆ 25 ವರ್ಷದಿಂದಲೂ ಪರಿಚಯ, ನಮ್ಮ ಕುಟುಂಬದೊಟ್ಟಿಗೆ ಅತ್ಯಾಪ್ತ ಬಂಧವನ್ನು ಅವರು ಹೊಂದಿದ್ದಾರೆ. ನನ್ನ ಪತ್ನಿ, ನನ್ನ ಭಾಮೈದ, ನನ್ನ ಅತ್ತೆಅವರುಗಳು ಸಹ ಮೋಹನ್ ಬಾಬು ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ವೈಯಕ್ತಿಕವಾಗಿ ನಾನು ಮೋಹನ್ ಬಾಬು ಅವರನ್ನು ಗೌರವಿಸುತ್ತೇನೆ. ಅವರ ಮೇಲೆ ಹೇರಲಾಗುತ್ತಿರುವ ಸುಳ್ಳು ಆರೋಪದ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಸೌಂದರ್ಯ ಅವರ ಸಾವು ಅಪಘಾತವೇ ಹೊರತು ಮತ್ತೇನೂ ಅಲ್ಲ. ವಿನಾಕಾರಣ ಸುಳ್ಳು ಸುದ್ದಿ ಹರಡುವುದು ಬೇಡವೆಂದು ನಾನು ಮನವಿ ಮಾಡುತ್ತೇನೆ’ ಎಂದಿದ್ದಾರೆ ರಘು.

See also  ಈ ಘಟನೆಗೂ ನಮಗೂ ಸಂಬಂಧವಿಲ್ಲ ಎಂದ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್..! ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಬಿಸಿಸಿಐ ಸ್ಪಷ್ಟನೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget