ಕ್ರೈಂ

ಸರಳಿಕಟ್ಟೆ ಮನೆಗೆ ನುಗ್ಗಿ 1.20 ಲಕ್ಷ ರೂ. ಹತ್ತು ಪವನ್ ಚಿನ್ನ ದೋಚಿದ ಕಳ್ಳರು

789

ಉಪ್ಪಿನಂಗಡಿ: ಸರಳಿಕಟ್ಟೆ ಮನೆಯೊಂದಕ್ಕೆ ಕಳ್ಳರು ನುಗ್ಗಿದ್ದು ಸುಮಾರು 1.20 ಲಕ್ಷ ರೂ. ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ ರವರ ಮನೆಗೆ ಕಳ್ಳರು ನುಗ್ಗಿದ್ದು ಇಂದು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪ ನಿರೀಕ್ಷಕ ಕುಮಾರ್ ಸಿ ಕಾಂಬ್ಳೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ.

See also  ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವ ಕಾಡಿನೊಳಗೆ ಪತ್ತೆ..! ಕೊಲೆ ಮಾಡಿ ಬಿಸಾಡಿದ್ಯಾರು..?
  Ad Widget   Ad Widget   Ad Widget   Ad Widget   Ad Widget