ಕ್ರೈಂರಾಜಕೀಯವೈರಲ್ ನ್ಯೂಸ್

ಸಾವರ್ಕರ್ ಫೋಟೋ ವಿವಾದಕ್ಕೆ ಯು.ಟಿ ಖಾದರ್ ಹೇಳಿದ್ದೇನು? ಏನಿದು ಸಾವರ್ಕರ್ ವಿವಾದ..?

ನ್ಯೂಸ್ ನಾಟೌಟ್ : ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ತೆರವು ವಿವಾದಕ್ಕೆ ಯು.ಟಿ ಖಾದರ್ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಟ್ಟ ಬೇಕು ಹೊರತು, ಕಿತ್ತು ಬಿಸಾಕಬಾರದು ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

ಅಂಬೇಡ್ಕರ್ ಒಂದು ಮಾತು ಹೇಳಿದ್ದರು. ಸ್ವಾತಂತ್ರ್ಯ ರಥವನ್ನು ಸಾಧ್ಯವಾದರೆ ಮುಂದಕ್ಕೆ ಎಳೆದುಕೊಂಡು ಹೋಗಿ.ಇಲ್ಲವಾದರೆ ಇದ್ದಲ್ಲೇ ಬಿಡಿ. ಆದರೆ ಹಿಂದಕ್ಕೆ ಎಳೆಯುವಂಥ ಕೆಲಸ ಮಾಡಬೇಡಿ ಎಂದು. ಹಿಂದೆ ಆಗಿರುವ ಸರಿ ತಪ್ಪು ವಿಶ್ಲೇಷಣೆ ಮಾಡುವುದು ಬೇಡ.‌ ನನ್ನ ಆದ್ಯತೆ ಜೋಡಿಸುವುದು ಮುರಿಯುವುದಲ್ಲ ಎಂದಿದ್ದಾರೆ.
ನಾವು ಜನರನ್ನು ಒಂದುಗೂಡಿಸುವ ಕೆಲಸ ಮಾಡುತ್ತೇನೆ. ಯಲಹಂಕ ಫ್ಲೈಓವರ್ ಇಲ್ಲವಾ ಅದರ ಕೆಳಗೆ ಜನ‌ ಓಡಾಡುವುದಿಲ್ಲವಾ? ಇದು ನನ್ನ ಕ್ಷೇತ್ರದ ಸಂಸ್ಕೃತಿ. ಅದು ನನ್ನ ಸಂಸ್ಕೃತಿ. ಐನೂರು ಜನರು ಒಂದೊಂದು ವಿಚಾರ ಹೇಳುತ್ತಾರೆ. ಪ್ರೀತಿಯಿಂದ ಸಮಾಜವನ್ನು ಗೆಲ್ಲುತ್ತೇವೆ. ಪ್ರೀತಿಯಿಂದ ದೇಶವನ್ನು ಕಟ್ಟುತ್ತೇವೆ ಎಂದು ಹೇಳಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದ ಅಸೆಂಬ್ಲಿ ಹಾಲ್‌ನಲ್ಲಿ ಸಾವರ್ಕರ್ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಅಂದಿನ ಸರ್ಕಾರದ ನಡೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಸದನದಲ್ಲೂ ಹೊರಗೂ ಪ್ರತಿಭಟನೆಯನ್ನು ನಡೆಸಿತ್ತು. ಸಾವರ್ಕರ್ ಫೋಟೋವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿತ್ತು. ಆದರೆ ಇದೀಗ ಆಡಳಿತದಲ್ಲಿ ಕಾಂಗ್ರೆಸ್‌ ಪಕ್ಷವಿದೆ. ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದೆ. ಹಾಗಾದರೆ ಸಾವರ್ಕರ್ ಫೋಟೋ ವಿಚಾರವಾಗಿ ಸರ್ಕಾರದ ನಡೆ ಎಂಬ ಬಗ್ಗೆ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.

ಡಿ.12ರಂದು ಸುವರ್ಣ ಸಂಭ್ರಮ ಬೆಳಗಾವಿ ಸುವರ್ಣಸೌಧದಲ್ಲಿ‌ ಡಿ.12ರಂದು ಸುವರ್ಣ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸುವರ್ಣ ಸೌಧದ ಮುಂಭಾಗ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಸ್ಪೀಕರ್ ಖಾದರ್ ಮಾಹಿತಿ‌ ನೀಡಿದರು. ರಾಜ್ಯಪಾಲರು ಭಾಗವಹಿಸಲಿದ್ದಾರೆ. ಸಿಎಂ, ಸಚಿವ ಸಂಪುಟ ಸಚಿವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಜಿ ಸಭಾಧ್ಯಕ್ಷರು ಹಾಗೂ ಮಾಜಿ ಸಭಾಪತಿಗಳನ್ನು ಗೌರವಿಸಲಾಗುವುದು ಎಂದು‌ ತಿಳಿಸಿದರು. ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ಇರಲಿದೆ. ನುಡಿಸಿರಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಡಲಿದ್ದಾರೆ. 250 ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿಯನ್ನು ‌ನೀಡಿದರು.

Related posts

ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೋರಿದ ಪ್ರಜ್ವಲ್‌..! ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್

ಫಾರೆಸ್ಟ್‌ ಗಾರ್ಡ್‌ ಗಸ್ತು ತಿರುಗುತ್ತಿದ್ದ ವೇಳೆ ದಿಢೀರ್ ಹುಲಿ ಎಂಟ್ರಿ..! ಇಲ್ಲಿದೆ ವೈರಲ್ ವಿಡಿಯೋ

ಸುಳ್ಯ: ಕಾರು – ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ