ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಹತ್ತು ಹಲವು ಇತಿಹಾಸಗಳನ್ನು ಸೃಷ್ಟಿಸಿ, ನಾಡಿನ ಜನಮಾನಸದಲ್ಲಿ ಸಾಧನೆಗಳ ಸರದಾರನಾಗಿ ಮುನ್ನಡೆಯುತ್ತಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿ ಲಭಿಸಿದೆ.
ಸಹಕಾರ, ಬ್ಯಾಂಕಿಂಗ್ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅನುಪಮ ಸೇವೆ ಮಾಡಿದ್ದಾರೆ. ಕಳೆದ 31 ವರ್ಷದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾಯಕತ್ವಕ್ಕೆ ಹೆಸರುವಾಸಿಯಾಗಿರುವ ಇವರಿಗೆ ಕಳೆದ 18 ವರ್ಷಗಳಿಂದ ಅಪೆಕ್ಸ್ ಬ್ಯಾಂಕ್ ನಿಂದ ಅತ್ಯುತ್ತಮ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನಬಾರ್ಡ್ ಪ್ರಶಸ್ತಿ ಲಭಿಸಿದೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣಕ್ಕೆ ಕೊಡುಗೆಗಳನ್ನು ನೀಡಿದ್ದಾರೆ.
ಅರಸಿ ಬಂದ ಪ್ರಶಸ್ತಿಗಳು
ಡಾ. ರಾಜೇಂದ್ರ ಕುಮಾರ್ ಅವರಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಅರಸಿಕೊಂಡು ಬಂದಿವೆ. ಕರ್ನಾಟಕ ಸರ್ಕಾರದಿಂದ ‘ಸಹಕಾರ ರತ್ನ’ ಪ್ರಶಸ್ತಿ, ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿಶ್ವವಿದ್ಯಾಲಯದಿಂದ ‘ಗೌರವ ಡಾಕ್ಟರೇಟ್’, ‘ವಿಶ್ವ ಬಂಧುಶ್ರೀ’, ‘ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ’, ‘ಮಹಾತ್ಮ ಗಾಂಧಿ ಸಮ್ಮಾನ್’ ‘ಬೆಸ್ಟ್ ಚೇರ್ ಮೆನ್ ನ್ಯಾಶನಲ್ ಅವಾರ್ಡ್ ‘ ಮತ್ತು ‘ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್ ಔಟ್ಸ್ಟಾಂಡಿಂಗ್ ಗ್ಲೋಬಲ್ ಲೀಡರ್ಶಿಪ್’ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.