ಕರಾವಳಿಕೊಡಗು

ಮಡಿಕೇರಿ: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಫ್ಯಾನ್‌ಗೆ ನೇಣು ಬಿಗಿದು ಕೊನೆಯುಸಿರೆಳೆದ..!ಬಸ್‌ ಕಂಡಕ್ಟರ್‌ವೊಬ್ಬನ ಈ ನಿರ್ಧಾರಕ್ಕೆ ಕಾರಣವೇನು ?

172

ನ್ಯೂಸ್‌ ನಾಟೌಟ್‌ : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು,ಕೊಲೆ,ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ಈ ಘಟನೆಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರೂ ಕೂಡ ಮತ್ತೆ ಮತ್ತೆ ಬೆಳಕಿಗೆ ಬರುತ್ತಲೇ ಇರೋದು ವಿಪರ್ಯಾಸ..!ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣದ ಬಗ್ಗೆ ಮಡಿಕೇರಿಯಿಂದ ವರದಿಯಾಗಿದೆ.

ಬಸ್‌ ಕಂಡಕ್ಟರ್‌ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದಲ್ಲದೇ ಫ್ಯಾನ್‌ಗೆ ನೇಣು ಬಿಗಿದುಕೊಂಡು (Kodagu News) ಆತ್ಮಹತ್ಯೆ ಮಾಡಿ ಕೊನೆಯುಸಿರೆಳೆದ ಘಟನೆ ಬಗ್ಗೆ ವರದಿಯಾಗಿದೆ. ಮಡಿಕೇರಿಯ ಲಾಡ್ಜ್‌ನಲ್ಲಿ ಮೊಣ್ಣಪ್ಪ (28) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ, ಮಡಿಕೇರಿಯಲ್ಲಿ ಖಾಸಗಿ ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರೂಮಿನ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡ ಲಾಡ್ಜ್‌ ಸಿಬ್ಬಂದಿ ಮತ್ತೊಂದು ಕೀ ಬಳಸಿ ತೆರೆದುನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಮಡಿಕೇರಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

See also  ನೆರೆಯ ಕೇರಳದಿಂದ ಮಂಗಳೂರಿಗೆ ಬಯೋ ಮೆಡಿಕಲ್ ವೇಸ್ಟ್,ತ್ಯಾಜ್ಯ ಡಂಪಿಂಗ್:ಮಂಗಳೂರು ಪಾಲಿಕೆ ಅಧಿಕಾರಿಗಳೇ ಕೃತ್ಯದಲ್ಲಿ ಭಾಗಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget