ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

136

ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಮಂಗಳವಾರ (ನ. 12 ) ಆಯೋಜಿಸಲಾಯಿತು. ವಕೀಲ ರಾಮಚಂದ್ರ ಶ್ರೀಪಾದ ಹೆಗ್ಗಡೆ ಸುಳ್ಯ “ವಕೀಲ ವೃತ್ತಿಯಲ್ಲಿ ಇರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕೃಷ್ಣ, ಬಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಅಧಿಕಾರಿ ಪ್ರೊ.ಕೆ.ವಿ. ದಾಮೋದರ ಗೌಡ, ಸಹಾಯಕ ಪ್ರಾಧ್ಯಾಪಕಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್. ಎಸ್, ಕಾಲೇಜಿನ ಕಾನೂನು ನೆರವು ಘಟಕದ ಸಂಯೋಜಕಿ ಸಹಾಯಕ ಪ್ರಾಧ್ಯಾಪಕಿ ಕಲಾವತಿ ಎಂ. ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅನೀಶ ಮತ್ತು ನಂದನ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದೀಪ್ತಿ, ಕವನ ಮತ್ತು ಅಂಜಲಿ ಪ್ರಾರ್ಥಿಸಿದರು. ವಿದ್ಯಾರ್ಥಿ ಅನೀಶ ವಂದಿಸಿದರು. ವಿದ್ಯಾರ್ಥಿನಿ ನಂದನ ಸ್ವಾಗತಿಸಿದರು. ಹಾಗೂ ಸಾಂದ್ರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget