ಕ್ರೈಂವೈರಲ್ ನ್ಯೂಸ್

Shakthi Scheme Effect: ಟ್ರಿಪ್‍ ಗೆ ಹೋದ ಪತ್ನಿ ಮನೆಗೆ ಬಂದಿಲ್ಲ..! ಬಸ್ ಟೈಯರ್ ಗೆ ತಲೆಕೊಟ್ಟು ಪತಿರಾಯನ ಅವಾಂತರ! ಬಸ್ ಸಂಚಾರ ಸ್ಥಗಿತ..!

312

ನ್ಯೂಸ್ ನಾಟೌಟ್‌: ರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಗೆ ಬಂದಾಗಿನಿಂದ ಒಂದಲ್ಲ ಒಂದು ಅವಾಂತರಗಳು ಬಯಲಾಗ್ತಾನೇ ಇವೆ. ಇದೀಗ ಕುಡುಕ ಪತಿಯೊಬ್ಬ ಟ್ರಿಪ್‍ಗೆ ಹೋದ ತನ್ನ ಪತ್ನಿ (Wife) ಬಂದಿಲ್ಲವೆಂದು ಅವಾಂತರ ಸೃಷ್ಟಿಸಿದ್ದಾನೆ.

ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ಪತ್ನಿ ವಿರುದ್ಧ ಸಿಟ್ಟಿಗೆದ್ದ ಪತಿ ಬಸ್ ಟೈಯರ್‌ಗೆ ತಲೆಕೊಟ್ಟು ಆತ್ಮ * ಹತ್ಯೆಗೆ ಯತ್ನಿಸಿದ್ದಾನೆ. ಪರಿಣಾಮ ಹೊಸಕೋಟೆ (Hosakote) ಬಸ್ ನಿಲ್ದಾಣದಲ್ಲಿ ಅರ್ಧಗಂಟೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಕೆಲಕಾಲ ಪರದಾಡುವಂತಾಯ್ತು.
ನನ್ನ ಹೆಂಡತಿ ಟ್ರಿಪ್ ಗೆ ಹೋದವಳು ಇನ್ನೂ ವಾಪಸ್ ಬಂದಿಲ್ಲ. ಸಿದ್ದರಾಮಯ್ಯ (Siddaramaiah) ಸರಿಯಿಲ್ಲ, ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ. ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣವನ್ನು ತೆಗೆದು ವ್ಯಕ್ತಿ ಹಾಕಬೇಕೆಂದು ಒತ್ತಾಯಿಸಿದ್ದಾನೆ.

ಕಂಠಪೂರ್ತಿ ಕುಡಿದಿರುವ ವ್ಯಕ್ತಿ ತೂರಾಡಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ ಬಸ್ ಟೈಯರ್ ಗೆ ತಲೆಕೊಟ್ಟು ಪ್ರಾಣಕಳೆದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನೆರೆದ ಜನ ಆತನನ್ನು ರಕ್ಷಣೆ ಮಾಡಿದ್ದಾರೆ. ನಂತರ ಹೊಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಯುವಕರನ್ನು ವಿವಸ್ತ್ರಗೊಳಿಸಿ ಮೂತ್ರ ವಿಸರ್ಜಿಸಿದ್ಯಾರು? ಆ ರಾತ್ರಿ ನದಿ ದಂಡೆಯಲ್ಲಿ ನಡೆಯಿತು ಅಮಾನವೀಯ ಕೃತ್ಯ! ಯುವಕರು ಬಿಚ್ಚಿಟ್ಟ ಮಾಹಿತಿಗೆ ಪೊಲೀಸರೆ ಶಾಕ್!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget