ರಾಜಕೀಯವೈರಲ್ ನ್ಯೂಸ್

ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆಯಾ? ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು?

185

ನ್ಯೂಸ್ ನಾಟೌಟ್ : ಶಕ್ತಿ ಯೋಜನೆಯಿಂದ (Shakti Scheme) ಆಟೋ ಚಾಲಕರಿಗೆ (Auto Drivers) ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜೂನ್ 11ಕ್ಕೆ ಶಕ್ತಿ ಯೋಜನೆ ಪ್ರಾರಂಭ ಆಯ್ತು. ಉತ್ತಮವಾಗಿ ಯೋಜನೆ ನಡೆಯುತ್ತಿದೆ. ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಲಿ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ ಎಂದು ಹೇಳಿದರು.
ಈವರೆಗೂ ಯಾವ ಆಟೋ ಚಾಲಕರ ಸಂಘದವರು ನನ್ನ ಬಳಿ ಬಂದು ಕಷ್ಟ ಅಂತ ಹೇಳಿಲ್ಲ. ಯಾವುದೇ ಆಟೋ ಚಾಲಕರು ನನಗೆ ಮನವಿ ಮಾಡಿಲ್ಲ. ಒಂದು ತಿಂಗಳು ಆಗಲಿ, ಬಳಿಕ ಪರಿಶೀಲನೆ ಮಾಡಿ ಆಟೋದವರಿಗೆ ಸಮಸ್ಯೆಯಾದರೆ ಸರ್ಕಾರ ಪರಿಹಾರ ಕೊಡಲಿದೆ ಎಂದು ಭರವಸೆ ನೀಡಿದರು.

See also  ಧರ್ಮಸ್ಥಳದಲ್ಲಿ ಹಗಲಿನಲ್ಲೇ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು! ಆತಂಕದಲ್ಲಿ ಗ್ರಾಮಸ್ಥರು..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget