Latestಕ್ರೈಂದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯವೈರಲ್ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಮಂಗಳೂರು- ಬೆಂಗಳೂರು ರಸ್ತೆ ಕುಸಿತ..! ವಾಹನ‌ ಸವಾರರಲ್ಲಿ ಆತಂಕ..!

914

ನ್ಯೂಸ್ ನಾಟೌಟ್:  ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು – ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಸ್ತೆಗೆ ಮಣ್ಣು ಕುಸಿಯುತ್ತಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ವಾಹನ‌ ಸವಾರರಲ್ಲಿ ಆತಂಕ ಶುರುವಾಗಿದೆ.

ತಡೆಗೋಡೆ ನಿರ್ಮಿಸಿದ್ದರು ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿಯುತ್ತಿದೆ. ಹೀಗಾಗಿ ಮರಗಳು ನೆಲಕ್ಕೆ ಉರುಳುತ್ತಿದ್ದು, ಅಪಾರ ಮೌಲ್ಯದ ಕಾಫಿ ಬೆಳೆ ನಾಶವಾಗಿದೆ. ಶಿರಾಡಿಘಾಟ್​ ರಸ್ತೆಯಲ್ಲಿ ಭೂ ಕುಸಿತದಿಂದ ವಾಹನ ಸವಾರರು ಎಚ್ಚರಿಕೆಯಿಂದ ಇರಲು ತಿಳಿಸಲಾಗಿದೆ.

ಕೊಡಗಿನಲ್ಲಿ ಮಾವು ಮತ್ತು ಹಲಸು ಮೇಳ, 4 ದಿನಗಳ ಹಣ್ಣಿನ ಮೇಳಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ..! ಒಂದು ಗಂಟೆಯೊಳಗೆ ಪ್ರಯಾಣಿಕರ ಸಮೇತ ನದಿಗೆ ಬಿದ್ದ 2 ಕಾರುಗಳು..!

ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ..! ಪ್ರಯಾಣಿಕರನ್ನು ಉಳಿಸಿದ ನಿರ್ವಾಹಕನ ಸಾಹಸಕ್ಕೆ ಮೆಚ್ಚುಗೆ, ವಿಡಿಯೋ ವೈರಲ್

See also  ಬೆಳಗಾವಿಯಲ್ಲಿ ಮರಾಠರಿಂದ KSRTC ಕಂಡಕ್ಟರ್ ಮೇಲೆ ಹಲ್ಲೆ..! ನಿರ್ವಾಹಕರ ಮೇಲೆಯೇ ಅತ್ಯಾಚಾರ ಕೇಸ್‌ ದಾಖಲು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget