ಚಿಕ್ಕಮಗಳೂರುರಾಜಕೀಯವೈರಲ್ ನ್ಯೂಸ್

ಶೋಭಾ ಪರ ಬಿಎಸ್ ವೈ ಬ್ಯಾಟಿಂಗ್ ಬೆನ್ನಲ್ಲೇ ಸಿ.ಟಿ ರವಿ ಅಭಿಮಾನಿಗಳಿಗೆ ಶಾಕ್..! ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಪೋಸ್ಟರ್​ ಅಂಟಿಸಿವರ ವಿರುದ್ಧ ಎಫ್.ಐ.ಆರ್

160

ನ್ಯೂಸ್ ನಾಟೌಟ್: ಇತ್ತೀಚೆಗೆ ಲೋಕಸಭಾ ಚುನಾವಣಾ ಹೊಸ್ತಲಲ್ಲಿ ಹಲವು ರಾಜಕೀಯ ಕೆಸರೆರಚಾಟಗಳು ಜೋರಾಗಿವೆ. ಈ ಮಧ್ಯೆ ಭಾರೀ ಸುದ್ದಿಯಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೋ ಬ್ಯಾಕ್, ಶೋಭಾ ಹಾಠಾವೋ ಅಭಿಯಾನ ಮಾಡಿದವರಿಗೆ ಕಂಟಕ ಎದುರಾಗಿದೆ. ನಿನ್ನೆ(ಫೆ.25) ಬಿಎಸ್ ಯೆಡಿಯೂರಪ್ಪ ಶೋಭಾ ಪರವಾಗಿ ಬ್ಯಾಟ್ ಬೀಸಿ ಸಿ,ಟಿ.ರವಿಗೆ ಶಾಕ್ ನೀಡಿದ್ದರು.

ಇದರ ಬೆನ್ನಲ್ಲೇ ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ.

ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ. ಇದೆಲ್ಲದರ ನಡುವೆ ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಬಸವನಹಳ್ಳಿ ಪೊಲೀಸರಿಂದ ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಶೋಭಕ್ಕ ಎಲ್ಲಿದ್ದೀರ?, ಶೋಭಕ್ಕ ಕಾಣೆ ಎಂದು ತರೀಕೆರೆಯಿಂದ ಚಿಕ್ಕಮಗಳೂರುವರೆಗೂ ರಾತ್ರೋರಾತ್ರಿ ಪೋಸ್ಟರ್​​​ಗಳನ್ನು ಅಂಟಿಸಿದ್ದ ನಾಲ್ವರು ಯುವಕರಾದ ಸಂಜು, ಸಂಜಯ್, ವಿಷ್ಣು, ಚಂದ್ರಶೇಖರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಯುವಕರು ತರೀಕೆರೆ ಮೂಲದವರು. ತರೀಕೆರೆ ಪಟ್ಟಣದಿಂದ ಚಿಕ್ಕಮಗಳೂರು ನಗರದ ವರೆಗೂ ಪೋಸ್ಟರ್ ಅಂಟಿಸಿದ್ದರು. ನಗರ ಸಭೆ ಪೌರ ಕಾರ್ಮಿಕ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ. ಇನ್ನು ಯುವಕರು ಹಣ ನೀಡಿ ಪೋಸ್ಟರ್ ಅಂಟಿಸಲು ಹೇಳಿದ್ರು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

See also  500 ರೂಪಾಯಿ ಚಲನ್‌  ತಪ್ಪಿಸಲು ಪ್ರೀತಿಸಿದ ಹುಡುಗಿನ್ನೇ ನೆಲಕ್ಕುರುಳಿಸಿ ಹೋದ ಯುವಕ..! ಮುಂದೇನಾಯ್ತು..? ಇಲ್ಲಿದೆ ವಿಡಿಯೋ ವೈರಲ್!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget