ದೇಶ-ಪ್ರಪಂಚರಾಜಕೀಯರಾಜ್ಯವೈರಲ್ ನ್ಯೂಸ್

ಸಿದ್ದರಾಮಯ್ಯ ನಮ್ಮ ಮೂಲ ಕಾಂಗ್ರೆಸಿಗರಲ್ಲ ಎಂದ ಡಿ.ಕೆ. ಸುರೇಶ್..! ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ ಎಂದ ಲೋಕಸಭಾ ಅಭ್ಯರ್ಥಿ

ನ್ಯೂಸ್ ನಾಟೌಟ್: ಸಿದ್ದರಾಮಯ್ಯ ಮೂಲಕ ಕಾಂಗ್ರೆಸ್ ಪಕ್ಷವಲ್ಲ. ಬೇರೆ ಪಕ್ಷದಿಂದ ಬಂದವರು, ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್‌ ಹೇಳಿದ್ದಾರೆ.

ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ, ನಮ್ಮ ನಾಯಕರಾಗಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯ ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಬಡವರಿಗಾಗಿ ಒಂದಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ.

ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಎಂದರೆ ಏನೂ ಮಾಡೋಕಾಗಲ್ಲ ಎಂದು ತಿಳಿಸಿದರು. ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ದರು. ಅಮಾನತು ಮಾಡಿದ್ದರು. ಆದರೆ, ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ (ಕಾಂಗ್ರೆಸ್) ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

Related posts

ಶಬರಿಮಲೆ ದೇವಸ್ಥಾನಕ್ಕೆ ಕೋರ್ಟ್ ನೀಡಿದ ಎಚ್ಚರಿಕೆ ಏನು? ವಕೀಲರ ತಂಡವನ್ನು ಶಬರಿಮಲೆಗೆ ಕಳುಹಿಸಲು ಹೈಕೋರ್ಟ್ ತೀರ್ಮಾನಿಸಿದ್ದೇಕೆ?

ದರ್ಶನ್ ಪ್ರಕರಣ: ಪಟ್ಟಣಗೆರೆ ಶೆಡ್ ಮಾಲಿಕ ಉಲ್ಟಾ ಹೊಡೆದದ್ದೇಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಮಿಸ್ಡ್ ಕಾಲ್ ಕೊಟ್ಟು ಹುಡುಗರನ್ನು ಪಟಾಯಿಸುತ್ತಿದ್ದ ವಿವಾಹಿತೆ ಅರೆಸ್ಟ್..! ಕೊರಿಯರ್ ಬಾಯ್ ನಿಂದ ಬಯಲಾಯ್ತು ಹನಿಟ್ರ್ಯಾಪ್ ದಂಧೆ..!