ಉಪ್ಪಿನಂಗಡಿಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಗೋಳಿತೊಟ್ಟು: ನೈಲನ್ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಯುವಕ, ತಂದೆಯ ಸಾವಿಗೆ ಮನನೊಂದು ಕೃತ್ಯ ಎಸಗಿದನೇ..?

161

ನ್ಯೂಸ್ ನಾಟೌಟ್: ಯುವಕನೊಬ್ಬ ನೈಲನ್ ಹಗ್ಗದಿಂದ ಮನೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋಳಿತೊಟ್ಟುವಿನಿಂದ ವರದಿಯಾಗಿದೆ. ಮೇ 5 ರಂದು ದುರ್ಘಟನೆ ನಡೆದಿದೆ. ಮೃತರನ್ನು ಕಡಬ ಗ್ರಾಮದ ಗೋಳಿತೊಟ್ಟು ಗ್ರಾಮದ ಅನಾಲು ನಿವಾಸಿ ದಿ. ವಾಸಪ್ಪ ಗೌಡರವರ ಪುತ್ರ ಶ್ರೀ ಹರ್ಷ ಗೌಡ (21 ವರ್ಷ) ಎಂದು ಗುರುತಿಸಲಾಗಿದೆ.

ಮೇ4 ರಂದು ರಾತ್ರಿ ಮನೆ ಸಮೀಪ ಚಿಕ್ಕಪ್ಪ ಶೀನಪ್ಪ ಗೌಡರ ಮಗಳ ಮದುವೆಯ ಹಿನ್ನೆಲೆಯಲ್ಲಿ ಔತಣ ಕೂಟವಿತ್ತು. ಈ ಹಿನ್ನೆಲೆಯಲ್ಲಿ ಸಂಜೆಯ ತನಕ ಅಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದಿದ್ದಾರೆ. ಹಾಗೆ ಬಂದವರು ವಾಪಸ್ ಔತಣಕೂಟ ನಡೆಯುವತ್ತ ಹೋಗದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 5 ರಂದು ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಬದುಕಿಸುವ ಪ್ರಯತ್ನ ನಡೆಸಲಾಯಿತಾದರೂ ಅಷ್ಟರಲ್ಲೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮೂರು ವರ್ಷಗಳ ಹಿಂದೆ ಮೃತ ವ್ಯಕ್ತಿಯ ತಂದೆ ಸಾವಿಗೀಡಾಗಿದ್ದರು. ಆ ಬಳಿಕ ಆತ ಮಾನಸಿಕವಾಗಿ ಬಹಳಷ್ಟು ನೊಂದಿದ್ದ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

See also  SSLCಯಲ್ಲಿ ಫೇಲ್ ಆಗಿದ್ದಕ್ಕೆ ದೇವಿಯ ವಿಗ್ರಹ ವಿರೂಪಗೊಳಿಸಿದ ಬಾಲಕ..! ರಾತ್ರೋರಾತ್ರಿ ಒಬ್ಬನೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆ
  Ad Widget   Ad Widget     Ad Widget   Ad Widget   Ad Widget   Ad Widget