ನ್ಯೂಸ್ ನಾಟೌಟ್: ಸಂಗೀತನಾದ ಟ್ರಸ್ಟ್ ಕೋನಸಂದ್ರ – ಕೆಂಗೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಸಹಕಾರದೊಂದಿಗೆ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಇತ್ತೀಚೆಗೆ ಆಯೋಜಿಸಿದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಗ್ರಾಮೀಣ ಪ್ರತಿಭೆ ಸೋನಾ ಅಡ್ಕಾರ್ ಗೆ ಕರುನಾಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭ ಶರತ್ ಅಡ್ಕಾರ್ ದಂಪತಿಯ ಪುತ್ರಿ. ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯಲ್ಲಿ ಓದುತ್ತಿದ್ದಾಳೆ.