ನ್ಯೂಸ್ ನಾಟೌಟ್: ಆಗಸ್ಟ್ 15ರಿಂದ ಆಗಸ್ಟ್ 18ರ ತನಕ ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರ ಇಲ್ಲಿ ಶ್ರೀ ಕೃಷ್ಣಾಷ್ಟಮಿ ಮತ್ತು ನೂತನ ಭಜನಾ ಮಂದಿರದ ಶಿಲಾನ್ಯಾಸ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.23ರಂದು ನಡೆಯಿತು.
ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಗಿರಿಧರ ಗೌಡ ನಾಯರ್ ಹಿತ್ತಲು, ಉಪಾಧ್ಯಕ್ಷೆ ಹರಿಣಾಕ್ಷಿ, ಕಾರ್ಯದರ್ಶಿ ನಿರಂಜನ ಮಿತ್ತಮಜಲು, ಜೊತೆ ಕಾರ್ಯದರ್ಶಿ ಉದಯಕುಮಾರ್ ಆರ್ತಾಜೆ, ಕೋಶಾಧಿಕಾರಿ ಲೀಲಾವತಿ ನಡುಮನೆ, ಸದಸ್ಯರುಗಳಾದ ಪುಷ್ಪಾವತಿ ನಡುಮನೆ, ಮೋಹಿನಿ ನಡುಮನೆ,ಕು.ರಕ್ಷಿತ್,ಕು.ಹೇಮಂತ್, ಕು.ಹಂಶಿಖ, ಸಂಚಾಲಕ ಸತ್ಯಶಾಂತಿತ್ಯಾಗಮೂರ್ತಿ ಉಪಸ್ಥಿತರಿದ್ದರು.