Latestಸಿನಿಮಾ

ಸೋನು ನಿಗಮ್ ಗೆ ಕನ್ನಡ ಹಾಡು ಹಾಡುವಂತೆ ಕೇಳಿಕೊಂಡ ವಿದ್ಯಾರ್ಥಿ, ‘ಕನ್ನಡ.. ಕನ್ನಡ..ಭಯೋತ್ಪಾದಕ ದಾಳಿ ನಡೆದಿದ್ದು ಇದಕ್ಕೆಯೇ’ ಖ್ಯಾತ ಗಾಯಕನ ವಿವಾದಾತ್ಮಕ ಹೇಳಿಕೆ

550

ನ್ಯೂಸ್‌ ನಾಟೌಟ್: ಖ್ಯಾತ ಬಾಲಿವುಡ್‌ ಸಿಂಗರ್ ಹಾಗೂ ಬಹುಭಾಷಾ ಗಾಯಕ ಸೋನುನಿಗಮ್ ಇದೀಗ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡರು.ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡರು.

ಸೋನು ನಿಗಮ್ ಮಾತಿಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಎಂದು ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

See also  ಹಂಪಿ ಉತ್ಸವದ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್‌ ಶ್ವಾನ ಸಾವು..! ಬಾಂಬ್, ಸ್ಪೋಟಕ ಪತ್ತೆ ದಳದಲ್ಲಿ ಪರಿಣಿತಿ ಹೊಂದಿದ್ದ ಶ್ವಾನ ಅಪಘಾತಕ್ಕೆ ಬಲಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget