ಕರಾವಳಿಕ್ರೈಂವೈರಲ್ ನ್ಯೂಸ್

ಸೌಜನ್ಯ ಹೋರಾಟಕ್ಕೆ ಕೈ ಜೋಡಿಸಿದ ಪ್ರಬಲ ಒಕ್ಕಲಿಗ ಮಠ..! ಬೆಳ್ತಂಗಡಿ ಪ್ರತಿಭಟನೆಯಲ್ಲಿ ಆದಿಚುಂಚನಗಿರಿ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗಿ..! ಸೌಜನ್ಯ ಹೋರಾಟಕ್ಕೆ ಈಗ ಮತ್ತಷ್ಟು ಬಲ

206

ನ್ಯೂಸ್ ನಾಟೌಟ್: ಸೌಜನ್ಯ ಪ್ರಕರಣ ಬಿರುಸಿನ ಕಾವು ಪಡೆದುಕೊಳ್ಳುತ್ತಿದೆ. ರಾಜ್ಯದ ವಿವಿಧ ಕಡೆ ಹೋರಾಟದ ಶಕ್ತಿ ಪ್ರದರ್ಶನ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಸೌಜನ್ಯ ಹೋರಾಟಕ್ಕೆ ಮತ್ತೊಂದು ಬಲ ಸಿಕ್ಕಿದಂತಾಗಿದೆ. ಪ್ರಬಲ ಒಕ್ಕಲಿಗ ಸಮುದಾಯದ ಮಠವೂ ಕೂಡ ಈಗ ಸೌಜನ್ಯ ಹೋರಾಟದಲ್ಲಿ ಕೈ ಜೋಡಿಸಿದೆ.

ಹೌದು, ಜಗದ್ಗುರ ಆದಿಚುಂಚನಗಿರಿಯ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಸೂಚನೆ ಮೇರೆಗೆ ಮಂಗಳೂರಿನ ಕಾವೂರು ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಇದು ಹೋರಾಟಕ್ಕೆ ಸಿಕ್ಕಿರುವ ದೊಡ್ಡ ಬಲ ಎಂದೇ ಹೇಳಲಾಗುತ್ತಿದೆ.

ಸೌಜನ್ಯ ಹತ್ಯೆ ಪ್ರಕರಣ ನಡೆದು ಹಲವು ವರ್ಷಗಳಾಗಿವೆ. ಇಲ್ಲಿ ತನಕ ನೈಜ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ , ಕಾನೂನು ಇಲಾಖೆ ವಿಫಲವಾಗಿದೆ. ಈ ಕೂಡಲೇ ನೈಜ ಆರೋಪಿಗಳ ಬಂಧನವಾಗಬೇಕು. ಸೌಜನ್ಯ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಅನ್ನುವ ಕೂಗು ಎಲ್ಲ ಕಡೆಯಿಂದ ಕೇಳಿ ಬರುತ್ತಿದೆ.

See also  ಮಂಗಳೂರು: ಲಕೋಟೆಯಲ್ಲಿ ಸಂಸ್ಕರಿಸಿದ ಮಾನವನ ಅಸ್ಥಿಗಳು ಪತ್ತೆ..! ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget