ಕರಾವಳಿವೈರಲ್ ನ್ಯೂಸ್

ಅ.22ಕ್ಕೆ ಸೌಜನ್ಯ ನ್ಯಾಯಕ್ಕಾಗಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಯಕರು ಭಾಗಿ

206

ನ್ಯೂಸ್ ನಾಟೌಟ್: ಕಾಮಾಂದ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಸಂಘ ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಒಟ್ಟಾಗಿ ಬೀದಿಗಿಳಿದು ಪ್ರತಿನಿತ್ಯ ಹೋರಾಟ ನಡೆಸುತ್ತಿದ್ದಾರೆ. ಇದೀಗ ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ವತಿಯಿಂದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಕ್ಟೋಬರ್ 22ರಂದು ರಾತ್ರಿ 7.30ಕ್ಕೆ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಸೌಜನ್ಯ ನ್ಯಾಯದ ಪರ ಹೋರಾಟಗಾರ, ಹಿಂದೂ ಪರ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕರ್ತರು ಆಗಮಿಸಲಿದ್ದಾರೆ.

ಅತಿ ಶೀಘ್ರದಲ್ಲಿ ಸೌಜನ್ಯ ಸಾವಿನ ಹಿಂದಿರುವ ಶಕ್ತಿಗಳ ಮುಖ ಕಳಚಿಕೊಳ್ಳಬೇಕೆಂದು ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುಳ್ಯ ತಾಲೂಕು ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

See also  ಉಪ್ಪಿನಂಗಡಿ: ಬಸ್ಸಿನಲ್ಲಿ ಮಗುವನ್ನು ಎತ್ತಿಕೊಂಡು ಬಂದ ಮಹಿಳೆಗೆ ಸೀಟು ಬಿಟ್ಟು ಕೊಟ್ಟ ಮಹಿಳೆ, ತಾನು ನಿಂತಿರುವ ವೇಳೆ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡು ಮೃತ್ಯು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget