ಕರಾವಳಿ

ಸ್ಪೀಕರ್ ಯು.ಟಿ. ಖಾದರ್ ಅವರಿಗೆ “ದಿ ಗ್ರೇಟ್ ಸನ್ ಆಫ್ ಇಂಡಿಯಾ” ಪ್ರಶಸ್ತಿ ಪ್ರದಾನ

ನ್ಯೂಸ್ ನಾಟೌಟ್ : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾನುವಾರ ಹೊಸದಿಲ್ಲಿಯಲ್ಲಿ ಇಂಡಿಯನ್‌ ಕಾನ್ಫರೆನ್ಸ್‌ ಆಫ್‌ ಇಂಟಲೆಕ್ಚುವಲ್ಸ್‌ ಸಂಸ್ಥೆ ವತಿಯಿಂದ ‘ ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನಿಸಲಾಯಿತು.

ಕಾರ್ಯಕ್ರಮವನ್ನು ಭಾರತೀಯ ಕಾನೂನು ಆಯೋಗದ ಅಧ್ಯಕ್ಷ ರಿತು ರಾಜ್ ಅವಸ್ಥಿ ಉದ್ಘಾಟಿಸಿದರು. ಈ ಸಂದರ್ಭ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರ ಆತ್ಮ ಚರಿತ್ರೆಯ ಇಂಗ್ಲಿಷ್‌ ಅನುವಾದ “ಬೇಟಲ್ ನೋಟ್ ಯೆಟ್ ಓವರ್ ” ಪುಸ್ತಕ ಬಿಡುಗಡೆಗೊಳಿಸಲಾಯಿತು. ಒಡಿಶಾ ಹೈಕೋರ್ಟ್‌ನ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ವಿ. ಗೋಪಾಲ್ ಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Related posts

ಪ್ರವೀಣ್ ನೆಟ್ಟಾರ್‌ ಹತ್ಯೆ ಪ್ರಕರಣ: ಮತ್ತಿಬ್ಬರು ಪೊಲೀಸ್ ಬಲೆಗೆ

ಬೆಳ್ಳಾರೆಯ ಜ್ಞಾನಗಂಗಾ ಶಾಲೆ ಬಳಿ ಬೆಂಕಿ ಅನಾಹುತ!

ನೀರಿನಲ್ಲಿ ಕೊಚ್ಚಿ ಹೋದ 2ನೇ ತರಗತಿ ವಿದ್ಯಾರ್ಥಿನಿ