ಕರಾವಳಿ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪೊಲೀಸ್ ವಶಕ್ಕೆ

408

ನ್ಯೂಸ್ ನಾಟೌಟ್ : ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಸ್ವತಃ ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.

ಮುತಾಲಿಕ್ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು ಬಂದಿದ್ದರು. ಈ ಬಗ್ಗೆ ನಿನ್ನೆಯೇ ನಮಗೆ ಮಾಹಿತಿ ಇತ್ತು. ಇಂದು ಉಡುಪಿ ಜಿಲ್ಲೆಗೆ ಆಗಮಿಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕ ತಕ್ಷಣ ಉಡುಪಿ ಪೊಲೀಸರ ಜೊತೆ ಸಂರ‍್ಕ ಬೆಳೆಸಿ ಹೆಜಮಾಡಿ ಚೆಕ್ಪೋಸ್ಟ್ ನಲ್ಲಿ ವಶಕ್ಕೆ ಪಡೆದು ಮತ್ತೆ ಉಡುಪಿಗೆ ಬಿಟ್ಟು ಕಳುಹಿಸಲಾಗಿದೆ. ನಿಷೇಧ ಆದೇಶ ಉಲ್ಲಂಘನೆ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಹೇಳಿದ್ದಾರೆ.

See also  ಮಂಗಳೂರಿನ ಯುವಕ ಅಬುಧಾಬಿಯಲ್ಲಿ ಸಾವು..! ಎ.ಸಿ.ಮೆಕ್ಯಾನಿಕ್ ಆಗಿದ್ದ ಆತ ಕಟ್ಟಡದಿಂದ ಬಿದ್ದು ಮೃತ್ಯು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget