ಕರಾವಳಿಸುಳ್ಯ

ಎಸ್ ಎಸ್ ಎಫ್ ಸುಳ್ಯ ವಿಭಾಗ ವತಿಯಿಂದ 308ನೇ ರಕ್ತದಾನ ಶಿಬಿರ, ಸಂಘಟನೆಯ ಕಾರ್ಯಕ್ಕೆ ಶಾಸಕಿ ಕು.ಭಾಗೀರಥಿ ಮುರುಳ್ಯ ಶ್ಲಾಘನೆ

178

ನ್ಯೂಸ್ ನಾಟೌಟ್ : ಜಿಲ್ಲಾ ಆಸ್ಪತ್ರೆ ವೆಸ್ಟಾಕ್ ಮತ್ತು ತಾಲೂಕು ಆಸ್ಪತ್ರೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಎಸ್ ಎಸ್ ಎಫ್ ಸುಳ್ಯ ವಿಭಾಗ ವತಿಯಿಂದ 308ನೇ ರಕ್ತದಾನ ಶಿಬಿರ ಸೆ. 25 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಕು.ಭಾಗಿರತಿ ಮುರುಳ್ಯ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಶ್ಲಾಘಿಸಿದ್ದು, ಸುಳ್ಯ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಎಸ್ ಎಸ್ ಎಫ್ ಸಂಘಟನೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿದೆ ಎಂದರು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್,ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು,ತಾಲೂಕು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ ಬಿ ಸುಧಾಕರ್ ರೈ,ಸುಳ್ಯ ಪ್ರೆಸ್ ಕ್ಲಬ್‌ ಅಧ್ಯಕ್ಷ ಹರೀಶ್ ಬಂಟ್ವಾಳ್‌, ಅಡ್ವಕೇಟ್ ಅಬೂಬಕ್ಕರ್ ಅಸ್ಕಾರ್ ಮೊದಲಾದವರು ಮಾತನಾಡಿ ರಕ್ತದಾನದ ಮಹತ್ವದ ಕುರಿತು, ಸಂಘಟನೆಯ ಈ ಉತ್ತಮ ಕಾರ್ಯದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು ಎಂದು ವರದಿ ತಿಳಿಸಿದೆ.

ಸುಳ್ಯ ಆರೋಗ್ಯ ಕೇಂದ್ರದ ಡಾ.ವಿಜಯಶ್ರೀ,ನಗರ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಕಿಶೋರಿ ಶೇಟ್, ಕೆ ಎಸ್ ಉಮ್ಮರ್, ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ , ಕೆ ಎಂ ಜೆ ಸುಳ್ಯ ಜೋನ್ ಅಧ್ಯಕ್ಷ ಅಬ್ದುಲ್ ಹಮೀದ್ ಬೀಜಕೊಚ್ಚಿ, ಸುಳ್ಯ ರೋನ್ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಸಅದಿ, ಮುಳುಗು ತಜ್ಞ ಅಬ್ಬಾಸ್ ಪೈಚಾರ್, ದ.ಕ ಜಿಲ್ಲಾ ಅಕ್ಷಯ ಚಾರಿಟೇಬಲ್ ಅಧ್ಯಕ್ಷ ಕರೀಂ ಕಾರ್, ದ.ಕ ಜಿಲ್ಲಾ ವಲ್ಫ್ ಬೋರ್ಡ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್,ಅಡ್ವಕೇಟ್ ಮೂಸಾ ಪೈಂಬೆಚ್ಚಾಲ್,ಎಸ್ ವೈ ಎಸ್ ರಾಜ್ಯ ಸಮಿತಿ ಸದಸ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಕಟ್ಟೆಕ್ಕಾರ್ಸ್ ಮೊದಲಾದವರು ಶಿಬಿರದಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 60 ಕ್ಕೂ ಹೆಚ್ಚು ಮಂದಿ ರಕ್ತದಾನದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಸುಳ್ಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

See also  ಸಂಪಾಜೆ: ಆನೆದಾಳಿ, ಸಾವಿರಾರು ರೂ.ನಷ್ಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget