ರಾಜ್ಯವೈರಲ್ ನ್ಯೂಸ್ಶಿಕ್ಷಣ

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ ಯಾವಾಗ..? ಇಲ್ಲಿದೆ ಸಂಪೂರ್ಣ ಮಾಹಿತಿ

161

ನ್ಯೂಸ್ ನಾಟೌಟ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ತಿಳಿಸಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ.

ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ, ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ, ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ.

ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

See also  ಸುಳ್ಯದಲ್ಲಿ ತಲೆ ಎತ್ತಲಿದೆ 50 ಕೋಟಿ ರೂ. ವೆಚ್ಚದ ಬೃಹತ್‌ ಕ್ಯಾನ್ಸರ್ ಆಸ್ಪತ್ರೆ..! 12.5 ಎಕರೆ ಜಮೀನಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಸ್ಪತ್ರೆಗೆ ರೂಪುರೇಷೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget